ಬಜೆಟ್‌ ಅಧಿವೇಶನ | ಕೊಬ್ಬರಿ ಕುರಿತ ಚರ್ಚೆ: ಶಾಸಕರ ನಡುವೆ ವಾಕ್ಸಮರ

Date:

Advertisements

ವಿಧಾನಸಭೆಯ ಎರಡನೇ ದಿನದ ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಮತ್ತು ಖರೀದಿ ಕೇಂದ್ರ ಸ್ಥಗಿತ ವಿಷಯವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ವಾಕ್ಸಮರ ನಡೆಯಿತು.

ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಹಾಗೂ ಖರೀದಿ ಕೇಂದ್ರ ಸ್ಥಗಿತವಾಗಿರುವ ಕುರಿತು ಚರ್ಚಿಸಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರು ನಿಲುವಳಿ ಸೂಚನೆ ನೀಡಿದರು.

ವಿಧಾನಮಂಡಲ ಬಜೆಟ್ ಅಧಿವೇಶನದ ಎರಡನೇ ದಿನವಾದ ಇಂದಿನ ಕಾರ್ಯಕಲಾಪಗಳಲ್ಲಿ ಕೊಬ್ಬರಿ ಬೆಂಬಲ ಬೆಲೆ ಪ್ರಧಾನವಾಗಿ ಚರ್ಚೆಯಾಯಿತು. ಹಲವಾರು ನಾಯಕರು ವಿಶೇಷವಾಗಿ ಕೆಎಂ ಶಿವಲಿಂಗೇಗೌಡ, ಬಿಜೆಪಿಯ ಸುರೇಶ್ ಗೌಡ ಮತ್ತು ಜೆಡಿಎಸ್ ಪಕ್ಷದ ಹೆಚ್ ಡಿ ರೇವಣ್ಣ ನಡುವೆ ಕಾವೇರಿದ ವಾಗ್ವಾದ ನಡೆಯಿತು.

Advertisements

ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ, “ಕೊಬ್ಬರಿ ಖರೀದಿ ಮಾಡಲು ಡಿ ಕೆ ಶಿವಕುಮಾರ್‌ಗೆ ಅಧಿಕಾರವಿಲ್ಲ, ಖರೀದಿ ಮಾಡುವ ಅಧಿಕಾರ ಇರೋದು ಪ್ರಧಾನಿ ಮೋದಿಗೆ ಮಾತ್ರ” ಎಂದರು.

ಶಿವಲಿಂಗೇಗೌಡರ ಹೇಳಿಕೆ ವಾಕ್ಸಮರಕ್ಕೆ ಕಾರಣವಾಯಿತು. ಬಿಜೆಪಿ, ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಮಸ್ಯೆ ಬಗ್ಗೆ ಮಾತಾಡುವಾಗ ರಾಜಕೀಯ ಬೇಡ ಎಂದು ಶಾಸಕ ಸುರೇಶ್ ಗೌಡ ಮನವಿ ಮಾಡಿದರು.

“ಯಾರ ಮನೆಯಿಂದಲೂ ರೈತರಿಗೆ ಹಣ ಕೊಡೋದಿಲ್ಲ, ಯಾವುದೇ ಸರಕಾರ ಕೊಟ್ಟರೂ ಸರಕಾರದಿಂದಲೇ ಹಣ ಕೊಡಬೇಕು. ರೈತರ ಪರವಾಗಿ ಇಲ್ಲಿ ಮಾತಾಡಿ” ಎಂದು ಶಾಸಕ ಸುರೇಶ್ ಗೌಡ ಒತ್ತಾಯಿಸಿದರು.

ಆ ನಂತರ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ”ಕೊಬ್ಬರಿ ಬಹಳ ಸೂಕ್ಷ್ಮ ವಿಷಯ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ಸೇರಿ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬರಬೇಕು” ಎನ್ನುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X