ಬಿಡುವಿಲ್ಲದ ಪ್ರಚಾರ; ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ

Date:

ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ಬಳಲಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾರಿನಲ್ಲಿ ಕೂರುವ ವೇಳೆ ನಿತ್ರಾಣ ಕಳೆದುಕೊಂಡು ಕುಸಿದಿದ್ದಾರೆ.

ವಿಜಯನಗರದ ಕೂಡ್ಲಿಗಿ ಬಳಿ ಪ್ರಚಾರಕ್ಕೆ ತೆರಳಿದ್ದ ಸಿದ್ದರಾಮಯ್ಯ ಬಳಲಿಕೆಯಿಂದ ಕುಸಿದು ಕೂತ ಘಟನೆ ಕೂಡ್ಲಿಗಿ ಏರ್‌ ಬೇಸ್‌ ನಲ್ಲಿ ನಡೆದಿದೆ. ಇಂದು ವಿಜಯನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಸಿದ್ದರಾಮಯ್ಯ ಪ್ರಚಾರಕ್ಕೆ ತೆರಳಿದ್ದರು. 

ಕಾರಿನಲ್ಲಿ ನಿಂತು ಕಾರ್ಯಕರ್ತರತ್ತ ಕೈ ಬೀಸುತ್ತಿದ್ದ ಸಿದ್ದರಾಮಯ್ಯ ಮರಳಿ ಕಾರಿನಲ್ಲಿ ಕೂರುವ ವೇಳೆ ವಾಲಿದಂತೆ ಕೆಳಗೆ ಕುಸಿದರು. ಈ ವೇಳೆ ತಕ್ಷಣದಲ್ಲಿ ಸ್ಪಂದಿಸಿದ ಅವರ ಗನ್‌ ಮ್ಯಾನ್‌, ಅವರನ್ನೆತ್ತಿ ಕಾರಿನಲ್ಲಿ ಕೂರಿಸಿದರು. ಬಳಿಕ ಅವರಿಗೆ ತಂಪು ಪಾನೀಯ ನೀಡಿ ಆರೈಕೆ ಮಾಡಲಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅದೃಷ್ಟವಶಾತ್ ಸಿದ್ದರಾಮಯ್ಯ ಅವರ ಕಾರಿನ ಬಳಿ ಗನ್‌ಮ್ಯಾನ್ ಮತ್ತು ಇತರ ಬೆಂಬಲಿಗರು ಇದ್ದ ಕಾರಣ ಯಾವುದೆ ಅಪಾಯ ಸಂಭವಿಸಿಲ್ಲ. ವೈದ್ಯರು ಸಿದ್ದರಾಮಯ್ಯ ಅವರಿಗೆ ಗ್ಲೂಕೋಸ್ ನೀಡಿದ್ದಾರೆ, ಸಿದ್ದರಾಮಯ್ಯ ಅವರು ಕ್ಷಣಕಾಲ ಪ್ರಜ್ಞೆ ತಪ್ಪಿದ್ದರು ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರ ಮನೆಗೆ ತೆರಳಿ, ಆ ಬಳಿಕ ಅವರನ್ನು ವೈದ್ಯರು ಪರೀಕ್ಷಿಸಲಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ತೆರಳುತ್ತಾರೆ.

ಘಟನೆ ಕುರಿತು ಸ್ವತಃ ಸಿದ್ದರಾಮಯ್ಯನವರೆ ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್ ಕಾಮಕೃತ್ಯ | ಹಾಸನಕ್ಕೆ ಸೀಮಿತವಾ? ರಾಜ್ಯ ಮತದಾರರ ಕರ್ತವ್ಯವೇನು?

ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್‌ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ....

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...