ಟಿಕೆಟ್ ಹೆಸರಲ್ಲಿ ಕಲೆಕ್ಷನ್ ಮಾಡಿರುವುದು ʼಮೋಶಾʼ ನಿರ್ದೇಶನದಿಂದಲೋ: ಕಾಂಗ್ರೆಸ್‌ ಪ್ರಶ್ನೆ

Date:

Advertisements

ಬಿಜೆಪಿ ಸರ್ಕಾರದಲ್ಲಿ ಒಂದು ಬಗೆಯ ಲೂಟಿ, ಪಕ್ಷದಲ್ಲಿ ಮತ್ತೊಂದು ಬಗೆಯ ಲೂಟಿ, ಲೂಟಿಯೇ ಬಿಜೆಪಿಯ ಮನೆದೇವರು! ಟಿಕೆಟ್ ಹೆಸರಲ್ಲಿ ಕಲೆಕ್ಷನ್ ಮಾಡಿರುವುದು ಅಮಿತ್ ಶಾ ನಿರ್ದೇಶನದಿಂದಲೋ, ಮೋದಿ ನಿರ್ದೇಶನದಿಂದಲೋ? ಎಂದು ಕಾಂಗ್ರೆಸ್‌ ಕುಟುಕಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿ ಅಂದರೆ ‘ಭ್ರಷ್ಟ ಜನರ ಪಕ್ಷ’ ಎಂಬುದನ್ನು ಪದೇ ಪದೇ ಸಾಬೀತು ಮಾಡುತ್ತಿದ್ದಾರೆ. ಬಿಜೆಪಿ ಟಿಕೆಟ್ ವಂಚನೆಯಲ್ಲಿ ಮತ್ತೊಂದು ದೂರು ಕೇಳಿಬಂದಿದೆ, ಸ್ವತಃ ಪಕ್ಷದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಹೆಸರು ಈ ವಂಚನೆಯಲ್ಲಿ ಕೇಳಿಬಂದಿದೆ” ಎಂದು ಆರೋಪಿಸಿದೆ.

“ದಿನದಿನವೂ ಹೊಸ ಹೊಸ ಬಿಜೆಪಿಯ ಟಿಕೆಟ್ ವಂಚನೆ ಪ್ರಕರಣಗಳು ಹೊರಬರುತ್ತಿವೆ, ಕಲೆಕ್ಷನ್ ಮಾಸ್ಟರ್ ಅಮಿತ್ ಶಾ ಅವರ ಅಣತಿಯಂತೆ ಬಿಜೆಪಿಯ ಕಲೆಕ್ಷನ್ ಏಜೆಂಟ್ ಗಳು ವ್ಯಾಪಕವಾಗಿ “ಟೋಪಿ ವ್ಯಾಪಾರ” ಮಾಡಿದ್ದಾರೆ! ಸೋಲಿನ ಮುನ್ಸೂಚನೆ ಸಿಕ್ಕಿದ್ದೇ ತಡ, ಅಮಾಯಕ ಆಕಾಂಕ್ಷಿಗಳಲ್ಲಿ ಬಿಜೆಪಿ ಆಮಿಷ ತೋರಿಸಿ ವಂಚನೆ ಮಾಡಿದೆ. ಈ ಎಲ್ಲ ವಂಚನೆಗಳು ಬಿಜೆಪಿ ಕಚೇರಿಯಿಂದಲೇ ನಿಯಂತ್ರಣವಾದಂತಿದೆ” ಎಂದು ದೂರಿದೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X