ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಗಳ ‘ಕ್ರಿಟಿಕಲ್ ಕೇರ್’ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

Date:

Advertisements

ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ಕ್ರಿಟಿಕಲ್ ಕೇರ್‌ಗಳಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ 5 ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ 6 ಆಸ್ಪತ್ರೆಗಳು ಸೇರಿದಂತೆ ಒಟ್ಟು 11 ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿತ್ತು.

ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ 5 ಜಿಲ್ಲಾಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ‌ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Advertisements

₹137.75 ಕೋಟಿ ವೆಚ್ವದಲ್ಲಿ 50 ಬೆಡ್ ಕ್ರಿಟಿಕಲ್ ಕೇರ್‌ಗಳ ಸ್ಥಾಪನೆಗೆ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆಯ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕವನ್ನ 45 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಉಳಿದಂತೆ ನಾಲ್ಕು ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣವನ್ನ ತಲಾ 24 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್ ಆಸ್ಪತ್ರೆ, ವಿಜಯನಗರ ಜಿಲ್ಲಾಸ್ಪತ್ರೆ, ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.

ಇದನ್ನು ಓದಿದ್ದೀರಾ? ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

ಈ 5 ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಕಾಮಗಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ PM-ABHIM ಅಡಿ ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ವೆಚ್ಚವನ್ನ ಭರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.‌ಸಲಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X