‘ಭಾರತ’ವೆಂದರೆ ಹಿಂದೂರಾಷ್ಟ್ರ, ‘ಇಂಡಿಯಾ’ ಎಂದು ಕರೆಯಬೇಡಿ : ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್

Date:

Advertisements
  • ವಿಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ದ ಮೂರನೇ ಸಭೆ ಮುಂಬೈನಲ್ಲಿ ಮುಗಿದ ಬೆನ್ನಲ್ಲೇ ಹೇಳಿಕೆ
  • ನಾಗ್ಪುರ, ಗುವಾಹಟಿಯಲ್ಲಿ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

“ಭಾರತವೆಂದರೇನೇ ಹಿಂದೂರಾಷ್ಟ್ರ, ‘ಇಂಡಿಯಾ’ ಎಂದು ಕರೆಯಬೇಡಿ, ಭಾರತೀಯರೆಲ್ಲರೂ ಹಿಂದೂಗಳೇ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ನಾಗಪುರ ಹಾಗೂ ಗುವಾಹಟಿಯಲ್ಲಿ ಆಯೋಜಿಸಲಾಗಿದ್ದ ಪ್ರತ್ಯೇಕ ಸಮಾರಂಭದಲ್ಲಿ ಮಾತನಾಡುತ್ತಾ ಆರ್‌ಎಸ್‌ಎಸ್ ಮುಖ್ಯಸ್ಥ ಈ ಹೇಳಿಕೆ ನೀಡಿದ್ದಾರೆ.

‘ಭಾರತ ಹಿಂದೂ ರಾಷ್ಟ್ರ, ಎಲ್ಲ ಭಾರತೀಯರೂ ಹಿಂದೂಗಳೇ, ಹಿಂದೂಗಳು ದೇಶದ ಸಮಸ್ತ ಭಾರತೀಯರನ್ನೂ ಪ್ರತಿನಿಧಿಸುತ್ತಾರೆ” ಎಂದು ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.

Advertisements

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಸಮಸ್ತ ಜನರ ಬಗ್ಗೆ ಕಾಳಜಿ ಹೊಂದಿದೆ ಎಂದಿರುವ ಅವರು, ನಮ್ಮ ದೇಶದ ಹೆಸರು ಯುಗಯುಗಾಂತರಗಳಿಂದ ಭಾರತ. ಭಾಷೆ ಯಾವುದೇ ಇರಲಿ, ಹೆಸರು ಒಂದೇ ಆಗಿರುತ್ತದೆ ಎಂದು ಭಾಗವತ್ ಹೇಳಿದ್ದಾರೆ.

“ನಮ್ಮ ದೇಶ ಭಾರತ. ನಾವು ‘ಇಂಡಿಯಾ’ ಎಂಬ ಪದವನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ಎಲ್ಲಾ ಪ್ರಾಯೋಗಿಕ ಕ್ಷೇತ್ರಗಳಲ್ಲಿ ‘ಭಾರತ್’ ಪದವನ್ನು ಬಳಸಲು ಪ್ರಾರಂಭಿಸಬೇಕು. ಆಗ ಮಾತ್ರ ಬದಲಾವಣೆ ಆಗುತ್ತದೆ. ನಾವೆಲ್ಲರೂ ನಮ್ಮ ದೇಶವನ್ನು ‘ಭಾರತ್’ ಎಂದು ಕರೆಯಬೇಕು ಮತ್ತು ಅದನ್ನು ಇತರರಿಗೆ ವಿವರಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.

ಇದನ್ನು ಓದಿ : ಬಸವರಾಜು ಮೇಗಲಕೇರಿ ಆಡಿಯೊ ಅಂಕಣ | ಕೋಲೆ ಬಸವನೊಂದಿಗೆ ಬೀದಿಯಲ್ಲಿ ಬದುಕುವ ನೆಲೆ ಇಲ್ಲದ ಅಲೆಮಾರಿಗಳು

“ಭಾರತ ಅಥವಾ ಹಿಂದೂಸ್ತಾನ ಅನ್ನೋದು ಹಿಂದೂ ರಾಷ್ಟ್ರ. ಇದು ವಾಸ್ತವ ಸಂಗತಿ. ಸೈದ್ದಾಂತಿಕವಾಗಿ ಎಲ್ಲ ಭಾರತೀಯರೂ ಹಿಂದೂಗಳೇ. ಹಿಂದೂ ಎಂದರೆ ಭಾರತೀಯ ಎಂದೇ ಅರ್ಥ. ಇವತ್ತು ಭಾರತದಲ್ಲಿ ಇರುವ ಎಲ್ಲರೂ ಹಿಂದೂ ಸಂಸ್ಕೃತಿ ಜೊತೆ ನಂಟು ಹೊಂದಿದ್ದಾರೆ. ಹಿಂದೂ ಪೂರ್ವಜರು ಹಾಗೂ ಹಿಂದೂ ಭೂಮಿಯ ಜೊತೆ ಎಲ್ಲರೂ ನಂಟು ಹೊಂದಿದ್ದಾರೆ. ಇದರ ಹೊರತಾಗಿ ಮತ್ತೇನೂ ಇಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿವರಿಸಿದ್ದಾರೆ.

“ಆರ್‌ಎಸ್‌ಎಸ್‌ನ ಸಿದ್ದಾಂತ ಹಾಗೂ ವಿಚಾರಧಾರೆಗಳನ್ನು ಎಲ್ಲರೂ ಅರ್ಥ ಮಾಡಿಕೊಂಡಿದ್ದಾರೆ. ಕೆಲವರು ಒಪ್ಪಿದ್ದಾರೆ, ಮತ್ತೆ ಕೆಲವರು ಒಪ್ಪಿಲ್ಲ” ಎಂದಿರುವ ಮೋಹನ್ ಭಾಗವತ್, ”ನಮ್ಮ ಸಿದ್ದಾಂತವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡುವ ಜವಾಬ್ದಾರಿ ಸಹಜವಾಗಿಯೇ ಈ ದೇಶ, ಈ ಸಮಾಜ ಹಾಗೂ ಮಾಧ್ಯಮಕ್ಕೆ ಇದೆ” ಎಂದು ಹೇಳಿದರು.

“ಭಾರತವು ಎಲ್ಲರನ್ನೂ ಒಂದುಗೂಡಿಸುವ ದೇಶವಾಗಿದ್ದು, ಜಗತ್ತಿಗೆ ಇಂದು ಭಾರತದ ಅಗತ್ಯವಿದೆ. ಭಾರತವಿಲ್ಲದೆ ಜಗತ್ತು ಓಡಲು ಸಾಧ್ಯವಿಲ್ಲ. ನಾವು ಯೋಗದ ಮೂಲಕ ಜಗತ್ತನ್ನು ಸಂಪರ್ಕಿಸಿದ್ದೇವೆ. ಪೋಷಕರು ತಮ್ಮ ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಪ್ರದಾಯ, ಕೌಟುಂಬಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟವಾದ ‘ಇಂಡಿಯಾ’ದ ಮೂರನೇ ಸಭೆ ಮುಂಬೈನಲ್ಲಿ ಮುಗಿದ ಬೆನ್ನಲ್ಲೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದ್ದು, ವಿವಾದಕ್ಕೂ ಎಡೆಮಾಡಿಕೊಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X