ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ? ಸಿಎಂ ಸಿದ್ದರಾಮಯ್ಯ

Date:

Advertisements

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಅನಂತಕುಮಾರ್ ಹೆಗಡೆಯ ಬಗ್ಗೆ ಪತ್ರಕರ್ತರು ಕೇಳಿದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ” ಎಂದು ಪ್ರಶ್ನಿಸಿದ್ದಾರೆ.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ, “ಅನಂತಕುಮಾರ್ ಹೆಗಡೆ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದಾಗ ನಾವು ಅಧಿಕಾರಕ್ಕೆ ಬಂದಿರೋದೇ ಸಂವಿಧಾನವನ್ನು ಬದಲಾಯಿಸಲು ಅಂತ ಹೇಳಿಕೆ ನೀಡಿದ್ದರು. ಇಂಥವರಿಂದ ನಾವು ಸಂಸ್ಕೃತಿಯನ್ನು ಬಯಸಲಿಕ್ಕಾಗುತ್ತದಾ? ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ?” ಎಂದು ಹೇಳಿದರು.

“ಅನಂತಕುಮಾರ್ ಹೆಗಡೆಯಂಥವರ ಬಾಯಲ್ಲಿ ಇಂಥದ್ದೇ ಭಾಷೆ ಬಳಕೆಯಾಗುವುದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೌರವ ಕೊಡುವವರೂ ಇದ್ದಾರೆ. ಕೊಡದೇ ಇರುವವರೂ ಇದ್ದಾರೆ. ರಾಜಕೀಯವಾಗಿ ಮಾತನಾಡುವವರಲ್ಲಿ ಗೌರವ ಕೊಡಿ ಎಂದು ಕೇಳಕ್ಕಾಗುತ್ತದೆಯೇ?” ಎಂದು ಕೇಳಿದ ಸಿಎಂ ಸಿದ್ದರಾಮಯ್ಯ, “ಅವರು ರಾಜಕೀಯವಾಗಿ ಅಶ್ಲೀಲ ಪದಗಳನ್ನು ಬಳಸಿದರೆ ಅವರ ಗೌರವಕ್ಕೆ ಕುಂದು ಬರುತ್ತದೆಯೇ ವಿನಃ, ನನಗೇನೂ ಆಗಲ್ಲ. ಕೇಂದ್ರದ ಮಂತ್ರಿಯಾಗಿದ್ದವರಿಗೆ ಯಾವ ರೀತಿಯ ಭಾಷೆ ಬಳಸಬೇಕು ಎನ್ನುವುದು ಗೊತ್ತಿಲ್ಲದಿದ್ದರೆ ಅವರು ಸುಸಂಸ್ಕೃತರಲ್ಲ. ಮನುಷ್ಯರಲ್ಲ. ಅಮಾನವೀಯವಾದಂಥವರು ಅನ್ನುವುದಷ್ಟೇ ತೋರುತ್ತದೆ” ಎಂದು ತಿಳಿಸಿದರು.

Advertisements

ಕುಮಟಾದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ, “ನೀನು ಬಾ, ಇಲ್ಲ ಬಿಡು. ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ” ಎಂದು ನಿಂದಿಸಿದ್ದರು.

ಇದನ್ನು ಓದಿದ್ದೀರಾ? ಬಾಬರಿ ಮಸೀದಿಯಂತೆಯೇ ಭಟ್ಕಳದ ಪಳ್ಳಿಯನ್ನೂ ಒಡೆಯುತ್ತೇವೆ: ಬಿಜೆಪಿ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

“ನಾನು ಅಯೋಧ್ಯೆಗೆ ಹೋಗುತ್ತೇನೆ. ಆದರೆ 22ಕ್ಕೆ ಹೋಗಲ್ಲ. ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ಧಮ್ಮು” ಎಂದು ಹೆಗಡೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ವಿವಾದವನ್ನು ಎಬ್ಬಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X