ಎಲ್ಲ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

Advertisements
  • ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು
  • ಮೈಸೂರು ಜಿಲ್ಲೆಯ ಜನರ ಋಣ ತೀರಿಸೋಕೆ ನಾವು ಬದ್ದರಾಗಿದ್ದೇವೆ: ಸಿಎಂ

ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ಕೊಡ್ತೀವಿ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದರು.

Advertisements

ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ. ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ದವಾಗಿದ್ದೇನೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ” ಎಂದರು.

ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ಜಿ.ಟಿ. ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡ, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X