ಉತ್ತರ ಪ್ರದೇಶ | ಪ್ರಧಾನಿ ವಿರುದ್ಧ ಹೇಳಿಕೆಗೆ ಕಾಂಗ್ರೆಸ್‌ನ ಸಚಿನ್‌ ಚೌಧರಿ ವಿರುದ್ಧ ಪ್ರಕರಣ

Date:

Advertisements
  • ಸಚಿನ್‌ ಚೌಧರಿ ವಿರುದ್ಧ ಅಕ್ಷಿತ್‌ ಅಗರ್‌ವಾಲ್‌ ದೂರು
  • ಹಿಂದೂ ಧರ್ಮದ ವಿರುದ್ಧವೂ ಸಚಿನ್‌ ಟೀಕೆ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ ಉತ್ತರ ಪ್ರದೇಶದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಚಿನ್‌ ಚೌಧರಿ ವಿರುದ್ಧ ರಾಜ್ಯ ಪೊಲೀಸರು ಶನಿವಾರ (ಏಪ್ರಿಲ್‌ 1) ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ಯುವ ಘಟಕದ ನಾಯಕ ಅಕ್ಷಿತ್‌ ಅಗರ್ವಾಲ್‌ ನೀಡಿದ ದೂರಿನ ಆಧಾರದಲ್ಲಿ ಸಂಭಾಲ್‌ ಕೊತ್ವಾಲಿ ಠಾಣೆಯಲ್ಲಿ ಸಚಿನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಶ್‌ ಚಂದ್ರ ತಿಳಿಸಿದ್ದಾರೆ.

ಸಂಭಾಲ್‌ನಲ್ಲಿ ಶುಕ್ರವಾರ (ಮಾರ್ಚ್‌ 31) ಮಾಧ್ಯಮಗೋಷ್ಠಿಯೊಂದರಲ್ಲಿ ಕಾಂಗ್ರೆಸ್‌ ನಾಯಕ ಸಚಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಅಕ್ಷಿತ್‌ ಸುದ್ದಿಗಾರರಿಗೆ ತಿಳಿಸಿದರು.

Advertisements

ಅಕ್ಷಿತ್‌ ಅಗರ್‌ವಾಲ್‌ ಅವರು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಜಿಲ್ಲಾ ಘಟಕದ ಉಸ್ತುವಾರಿಯಾಗಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಸಚಿನ್‌ ಅವರು ಅದಾನಿ ಹಿಂಡನ್‌ಬರ್ಗ್‌ ವರದಿ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಚಿನ್‌ ಹೇಳಿದ ಅಸಭ್ಯ ಮತ್ತು ಆಕ್ಷೇಪಾರ್ಹ ನುಡಿಗಳ ದೃಶ್ಯಾವಳಿಯ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಈ ಸುದ್ದಿ ಓದಿದ್ದೀರಾ? ಬಾಂಗ್ಲಾದೇಶದಲ್ಲಿ ವಿವಾದ ಸೃಷ್ಟಿಸಿರುವ ಅದಾನಿ ವಿದ್ಯುತ್ ಒಪ್ಪಂದ

ಸಚಿನ್‌ ಚೌಧರಿ ಅವರು ಮೋದಿ ಅವರನ್ನು ಟೀಕಿಸುತ್ತ ಹಿಂದೂ ಧರ್ಮದ ಕುರಿತೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಅಕ್ಷಿತ್‌ ಆರೋಪಿಸಿದರು.

ಸಚಿನ್‌ ಅವರ ಆಕ್ಷೇಪಾರ್ಹ ಹೇಳಿಕೆಗಳ ವಿಡಿಯೊ ತುಣುಕನ್ನು ಪೊಲೀಸರಿಗೆ ನೀಡಲಾಗಿದೆ ಎಂದು ಅಕ್ಷಿತ್‌ ಅಗರ್‌ವಾಲ್‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X