ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಘೋಷಣೆ

Date:

Advertisements

ಜಾತಿ ಗಣತಿಯ ವರದಿಯನ್ನು ಜಾರಿ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನೂ ಅದನ್ನು ಪರಿಪೂರ್ಣವಾಗಿ ನೋಡಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ಸಂಪುಟಕ್ಕೆ ಇಟ್ಟು ಜಾರಿಗೆ ತರುತ್ತೇನೆ. ಜಾತಿ ಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾ. ಹೀಗಾಗಿ ಜಾರಿ ಮಾಡೇ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. 

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

ಈ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗಿವೆ. ಕೆಲವರು ಜಾರಿ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದರೆ, ಇನ್ನೂ ಕೆಲವರು ಇದನ್ನು ತಿರಸ್ಕೃತ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯನವರು ವರದಿಯನ್ನು ಜಾರಿ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಮೂಲಗಳ ಪ್ರಕಾರ, ಈ ಜಾತಿ ಗಣತಿ ವರದಿಯು 48 ಸಂಪುಟಗಳನ್ನು ಹೊಂದಿದ್ದು, ಮುಖ್ಯ ಶಿಫಾರಸು ಕಿರುಪುಸ್ತಕವು 200 ಪುಟಗಳನ್ನು ಹೊಂದಿದೆ. ಪ್ರತಿಯೊಂದು ಸಂಪಟವು ವಿವಿಧ ಜಾತಿಗಳ ಗುಂಪಿನ ಅಂಕಿಅಂಶಗಳನ್ನು ಹೊಂದಿದೆ. ವರದಿಯು ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ಜಾತಿ ಅಂಕಿ ಅಂಶಗಳನ್ನು ಒಳಗೊಂಡಿದೆ. ಜೊತೆಗೆ ಹಿಂದಿನ ವರದಿಗಳಲ್ಲಿ ಸೇರಿಸದ ಸಣ್ಣ ಜನಸಂಖ್ಯೆಯನ್ನು ಹೊಂದಿರುವ ಜಾತಿಗಳ ವಿವರಗಳನ್ನು ಒಳಗೊಂಡಿದೆ. ಒಟ್ಟು 1,351 ವಿವಿಧ ಜಾತಿಗಳ ಮೇಲೆ ಸಮೀಕ್ಷೆ ನಡೆಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X