ಜಾತಿ ಜನಗಣತಿ | ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ: ಕೆ ಎಸ್‌ ಈಶ್ವರಪ್ಪ

Date:

Advertisements

ಜನಪ್ರತಿನಿಧಿಗಳಿಗೆ ಜಾತಿ ಜನಗಣತಿ ವಿಚಾರದಲ್ಲಿ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರ ಬರಬೇಕು ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು.

ರಾಯಚೂರಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಲಿಂಗಾಯತರು, ಒಕ್ಕಲಿಗರು ಜಾತಿ ಜನಗಣತಿ ವಿರೋಧ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನು ಹಿಂದುಳಿದವರ ಪರ ಎನ್ನುತ್ತಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಇಷ್ಟು ದಿನ ಆದರೂ ಯಾಕೆ ಜಾತಿಗಣತಿ ಬಿಡುಗಡೆ ಮಾಡಿಲ್ಲ” ಎಂದು ಪ್ರಶ್ನಿಸಿದರು.

ಹಿಂದು ರಾಷ್ಟ್ರ ಮಾಡುತ್ತೇವೆ ಎಂದು ಪೇಜಾವರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, “ಶ್ರೀಗಳಿಗೆ ಸಾಷ್ಟಾಂಗ ನಮಸ್ಕಾರ ಹಾಕುವೆ. ಅವರ ಮಾರ್ಗದರ್ಶನದಲ್ಲಿ ಹಿಂದು ರಾಷ್ಟ್ರ ನಿರ್ಮಾಣಕ್ಕೆ ನಾವು ಸಿದ್ಧರಿದ್ದೇವೆ. ಸಿದ್ದರಾಮಯ್ಯರಿಗೆ ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂದಿದ್ದರೆ ಖುಷಿಯಾಗುತ್ತಿತ್ತು” ಎಂದು ಲೇವಡಿ ಮಾಡಿದರು.

Advertisements

”ಪ್ರಧಾನಿ ಮೋದಿ ಕೇಂದ್ರ ಸಂಪುಟದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡುವುದಾದರೆ ಸ್ವಾಗತ ಮಾಡುತ್ತೇನೆ. ರೈತರ ಬಗ್ಗೆ ಎಚ್ ಡಿ ದೇವೆಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಸಾಕಷ್ಟು ಕಾಳಜಿ ಇದೆ” ಎಂದು ಹೇಳೀದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X