ಜಾತಿಗಣತಿ ರಾಜಕೀಯ ಪ್ರೇರಿತ; ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ: ಡಾ.ಅಶ್ವತ್ಥ್ ನಾರಾಯಣ

Date:

Advertisements

ಜಾತಿಗಣತಿ ವರದಿ ರಾಜಕೀಯ ಪ್ರೇರಿತ. ಹಾಗಾಗಿ ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಶಾಸಕ, ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ(ನ.22)ದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸರ್ಕಾರ ಜನರಿಗೆ ಗುಣಮಟ್ಟದ ಆರೋಗ್ಯ ವ್ಯವಸ್ಥೆ ಕಲ್ಪಿಸುತ್ತಿಲ್ಲ. ಕುಡಿಯುವ ನೀರಿನಿಂದ ಹಿಡಿದು ಎಲ್ಲ ಮೂಲಭೂತ ಸೌಕರ್ಯವನ್ನು ನೀಡುತ್ತಿಲ್ಲ. ಈ ಯಾವುದಕ್ಕೂ ಸಿಎಂ ಸಿದ್ದರಾಮಯ್ಯನವರಲ್ಲಿ ಉತ್ತರವಿಲ್ಲ. ಕಾಂತರಾಜ್ ವರದಿಯ ಮೂಲಕ ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಸರ್ಕಾರ ಸದುದ್ದೇಶದಿಂದ ಜಾತಿಗಣತಿ ವರದಿ ಪಡೆಯುತ್ತಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಮಾಡುತ್ತಿದ್ದಾರೆ. ಈ ಸಮೀಕ್ಷೆ ಸರಿಯಾಗಿ ಆಗಿಲ್ಲ ಅಂತ ಪ್ರತಿಯೊಬ್ಬರೂ ಆರೋಪಿಸುತ್ತಿದ್ದಾರೆ. ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಸರ್ಕಾರ ಈವರೆಗೆ ಒಂದೂ ಭರವಸೆದಾಯಕ ಕೆಲಸ ಮಾಡಿಲ್ಲ. ರಾಹುಲ್ ಹೇಳಿದರೆಂದು ವರದಿ ಮೇಲೆ ರಾಜಕೀಯ ಮಾಡ್ತಿದ್ದಾರೆ. ಸರ್ಕಾರದ ನಿಲುವು ನೋಡಿಕೊಂಡು ನಾವು ಮುಂದುವರಿಯುತ್ತೇವೆ ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

Advertisements

ಕಾಂತರಾಜ್ ವರದಿ ಸಮೀಕ್ಷೆ ಅಂತ ಹೇಳುತ್ತಿದ್ದಾರೆ. ಇದಕ್ಕೆ ಕಾನೂನಾತ್ಮಕವಾಗಿ ಅವಕಾಶವಿಲ್ಲ. ಸರ್ವರಿಗೂ ಸಮಪಾಲು, ಸಮಪಾಲು ಎಂಬುದು ನಮ್ಮ ಸದುದ್ದೇಶ ಎಂದು ಸಿಎಂ ಹೇಳುತ್ತಿದ್ದಾರೆ. ಆದರೆ ಅದು ಹೇಳಿಕೆಗೆ ಮಾತ್ರ. ನಿಮಗೆ ಯಾವುದೇ ಸದುದ್ದೇಶವಿಲ್ಲ. ಎಲ್ಲವೂ ಸ್ವಾರ್ಥ. ಕುಟುಂಬ ಆಧಾರಿತವಾಗಿ ಕೆಲಸ ಮಾಡುತ್ತಿದ್ದೀರಾ. ಜನಗಳ ಬಗ್ಗೆ ನಿಮಗೆ ಎಳ್ಳಷ್ಟೂ ಕಾಳಜಿ ಇಲ್ಲ. ನಿಮ್ಮ ಎಲ್ಲ ನಡೆಗಳು ರಾಜಕೀಯ ಪ್ರೇರಿತವಾದುದು ಎಂದು ತಿಳಿಸಿದರು.

ನ.24ಕ್ಕೆ ಜಯಪ್ರಕಾಶ್ ಹೆಗಡೆ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಮಾಡುವ ಬಗ್ಗೆ ಮಾತನಾಡಿದ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ, ‘ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ಸರ್ಕಾರದ ನಡೆಯನ್ನು ನೋಡಿಕೊಂಡು ನಮ್ಮ ನಿಲುವನ್ನು ಕೂಡ ತಿಳಿಸುತ್ತೇವೆ. ನಮ್ಮ ಸಂಪೂರ್ಣ ವಿರೋಧ ಇದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X