ಜಾತಿ ಗಣತಿ | ಯಾವಾಗ ಆರಂಭ, ಎಂದು ಜಾರಿ ಎಂಬುದನ್ನು ಪ್ರಧಾನಿ ಮೋದಿ ಖಾತ್ರಿ ಪಡಿಸಲಿ: ರಾಹುಲ್‌ ಗಾಂಧಿ

Date:

Advertisements

ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ದೇಶದ ಜಾತಿ ಗಣತಿ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ದೆಹಲಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ನಾವು ಸಂಸತ್ತಿನಲ್ಲಿ ಜಾತಿ ಜನಗಣತಿ ಮಾಡುತ್ತೇವೆ ಎಂದು ಹೇಳಿದ್ದೆವು. ಮೀಸಲಾತಿ ವಿಚಾರದಲ್ಲಿ ಗೋಡೆಯಾಗಿರುವ ಶೇ. 50ರ ಮಿತಿಯನ್ನು ಮುರಿಯುತ್ತೇವೆ ಎಂದು ಹೇಳಿದ್ದೆವು. ಅದರೆ, ಪ್ರಧಾನಿ ನರೇಂದ್ರ ಮೋದಿ ಕೇವಲ ನಾಲ್ಕು ಜಾತಿಗಳಿವೆ ಎಂದು ಹೇಳಿದ್ದರು. ಈಗ ಅವರೇ ನಮ್ಮ ಆಗ್ರಹವನ್ನು ಒಪ್ಪಿಕೊಂಡು ಜಾತಿ ಗಣತಿ ಮಾಡುವುದಾಗಿ ಘೋಷಿಸಿದ್ದಾರೆ. ಮೋದಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಮುಕ್ತವಾಗಿ ಸ್ವಾಗತಿಸುತ್ತದೆ” ಎಂದರು.

Advertisements

“ಜಾತಿ ಗಣತಿ ವಿಚಾರದಲ್ಲಿ ತೆಲಂಗಾಣ ಮಾದರಿ ಬಿಹಾರ ಮಾದರಿಗಿಂತ ಉತ್ತಮವಾಗಿದೆ. ತೆಲಂಗಾಣ ಒಂದು ಮಾದರಿಯಾಗಿದ್ದು, ದೇಶಕ್ಕೆ ನೀಲನಕ್ಷೆಯಾಗಬಹುದು. ಜಾತಿ ಗಣತಿ ಯಾವ ಅವಧಿಗೆ ಮುಗಿಯಲಿದೆ ಎಂಬುದನ್ನು ಪ್ರಧಾನಿ ಮೋದಿಯವರು ದೇಶಕ್ಕೆ ಖಾತ್ರಿ ಕೊಡಬೇಕು. ಕಾಲ ವಿಳಂಬವನ್ನು ನಾವು ಸಹಿಸುವುದಿಲ್ಲ. ನಿರ್ಧಿಷ್ಟ ಸಮಯ ನಿಗದಿ ಪಡಿಸಿ ಶೀಘ್ರವೇ ಕಾರ್ಯ ಆರಂಭವಾಗಬೇಕು. ಕಾಯ್ದೆಯಾಗಿ ಜಾರಿಯಾಗಬೇಕು” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

“ಜಾತಿ ಜನಗಣತಿ ಇದು ಮೊದಲ ಹೆಜ್ಜೆ. ಕಾಂಗ್ರೆಸ್ ಪಕ್ಷ ಇದರ ಸುತ್ತ ಹೊಸ ದೃಷ್ಟಿಕೋನವನ್ನು ಹೊಂದಿದ್ದು, ನಮ್ಮ ದೃಷ್ಟಿಕೋನ, ಅವರು ಅಳವಡಿಸಿಕೊಂಡಿದ್ದಕ್ಕೆ ಸಂತೋಷವಿದೆ. ಜಾತಿ ಜನಗಣತಿಯ ಮೂಲಕ ಹೊಸ ಅಭಿವೃದ್ಧಿ ಮಾದರಿಯನ್ನು ತರುವುದು ನಮ್ಮ ಮುಂದಿನ ಗುರಿಯಾಗಿದೆ. ಈ ಗುರಿ ಕೇವಲ ಮೀಸಲಾತಿಗೆ ಸೀಮಿತವಾಗಿಲ್ಲ, ಈ ಸುತ್ತ ಪ್ರಮುಖ ಪ್ರಶ್ನೆಗಳನ್ನು ಎತ್ತುವುದರ ಬಗ್ಗೆಯೂ ನಾವು ಸ್ಪಷ್ಟತೆಯಲ್ಲಿದ್ದೇವೆ. ಅದು ಒಬಿಸಿಗಳು, ದಲಿತರು, ಆದಿವಾಸಿಗಳು – ಈ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಹೇಗೆ ಭಾಗಿಯಾಗಲಿದ್ದಾರೆ ಎನ್ನುವ ಬಗ್ಗೆ ನಮಗೆ ಪ್ರಶ್ನೆಗಳಿವೆ” ಎಂದು ಹೇಳಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮತ್ತೊಂದು ಪ್ರಮುಖ ವಿಷಯವಿದೆ. ಅದು ಆರ್ಟಿಕಲ್ 15 (5) ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ. ಎನ್‌ಡಿಎ-ಬಿಜೆಪಿ ಸರ್ಕಾರವು ಇದನ್ನು ಜಾರಿಗೆ ತರಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X