ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಇದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು. ಲೋಕಸಭಾ ಚುನಾವಣೆ ಮುಗಿದ ನಂತರ ಮೋದಿ ಈ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.
”ಕಾವೇರಿ ಸಮಸ್ಯೆಗೆ ಪರಿಹಾರವಿದೆ. ನಮಗೆ ಆಗಿರುವ ಅನ್ಯಾಯವನ್ನು ಪ್ರಧಾನಿ ಮೋದಿಯವರಿಗೆ ಮನವರಿಕೆ ಮಾಡಿಕೊಡಲು ರಾಜ್ಯದ ಸಂಸದರು ಒಟ್ಟಾಗಿ ಹೋರಾಡಬೇಕು. ತಮಿಳುನಾಡಿನಲ್ಲಿ 40 ಸಂಸದರು ಇರಬಹುದು, ನಾಮ್ಮವರು 28 ಮಂದಿ ಇರಬಹುದು. ಆದರೆ, ರಾಜಕೀಯ ಸಂಬಂಧಗಳನ್ನು ಬದಿಗಿಟ್ಟು ನಾವು ಒಂದಾಗಬೇಕು. ಇನ್ನು ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಕಾವೇರಿಗಾಗಿ ಹೋರಾಟ ನಡೆಸುತ್ತೇನೆ” ಎಂದರು.
“ಮುಂದಿನ ಸಂಸತ್ ಅಧಿವೇಶನದಲ್ಲಿ ಕಾವೇರಿ ವಿಷಯವನ್ನು ಪ್ರಸ್ತಾಪಿಸುತ್ತೇನೆ. ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಅಗತ್ಯವಿದೆ. ಆದರೂ, ಮೋದಿ ತಕ್ಷಣವೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಹೋರಾಡಬೇಕಾಗಿದೆ” ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮೋದಿ ಸಂಪುಟಕ್ಕೆ ಸೇರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮೋದಿ ಸಲಹೆ ನೀಡಿದರೆ ಮಾತ್ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕುಮಾರಸ್ವಾಮಿ ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ.
ಗೌಡರು ತಾವೂ ಪ್ರಧಾನಿ ಆಗಿದ್ರಿ,,ಆಗ ಕಾವೇರಿ ಸಮಸ್ಯೆ ಬಗೆಹರಿಸಬಹುದು ಇತ್ತು,,,