ಕಾವೇರಿ ವಿವಾದ | ವಿಧಾನಸೌಧ ಮುತ್ತಿಗೆಗೆ ಮುಂದಾದ ಕರವೇ

Date:

Advertisements
  • ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಸರ್ಕಾರಕ್ಕೆ ಕರವೇ ಎಚ್ಚರಿಕೆ
  • ರಾಜ್ಯದ ಎಲ್ಲ ಸಂಸದರು ರಾಜೀನಾಮೆ ನೀಡಬೇಕು: ರೈತರ ಆಗ್ರಹ

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ.

ಕಾವೇರಿಗಾಗಿ ಬೆಂಗಳೂರಿನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ. “ಯಾವುದೇ ಕಾರಣಕ್ಕೂ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನ ಕೂಡಲೇ ನಿಲ್ಲಿಸಬೇಕು” ಎಂದು ಆಗ್ರಹಿಸಿ ಇಂದು ಕರವೇ ನಾರಾಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಬೆಂಗಳೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಕೂಡ ಭುಗಿಲೆದ್ದಿದೆ. ಸುಪ್ರೀಂ ಕೋರ್ಟ್‌ ಸೂಚನೆ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್​ಎಸ್ ಪಕ್ಷ ಕರೆ ಕೊಟ್ಟಿದೆ.

Advertisements

ಈ ಸುದ್ದಿ ಓದಿದ್ದೀರಾ? ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ: 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ದೇಶನ

ಕನ್ನಡ ಪರ ಹೋರಾಟಗಾರರು ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಸುಪ್ರೀಂಕೋರ್ಟ್​ ಸೂಚನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆ ಮರಣ ಶಾಸನ ಎಂದು ಕಣ್ಣೀರಿಟ್ಟಿದ್ದು, ರಾಜ್ಯದ ಎಲ್ಲ ಸಂಸದರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X