ಸಿಬಿಐ ತನಿಖೆ | ಸಂಪುಟ ನಿರ್ಧಾರಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ

Date:

Advertisements

ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ತೆಗೆದುಕೊಳ್ಳುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬೇರೆ ಅರ್ಥ ನೀಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ವಿಕಾಸಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಅಸಲಿಗೆ ಯಾರೇ ಶಾಸಕ ಸಚಿವ ಅಥವಾ ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದರೆ ಸರ್ಕಾರದ ಅನುಮತಿ ಕಡ್ಡಾಯ ಎಂಬ ನಿಯಮ ಈಗಾಗಲೇ ಇದೆ” ಎಂದರು.

“ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಂಡೇ ಸಿಬಿಐ ಅಧಿಕಾರಿಗಳು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಬೇಕು. ಈ ಸಂಬಂಧ ಸರ್ಕಾರ ಯಾವ ಬದಲಾವಣೆಯನ್ನೂ ಮಾಡಿಲ್ಲ. ಇದೇ ಕಾರಣಕ್ಕೆ ಇಂದು ಸಿಬಿಐ ಯಾವುದೇ ಪ್ರಕರಣ ತನಿಖೆಗೆ ತೆಗೆದುಕೊಳ್ಳಬೇಕು ಎಂದರೆ ಒಂದೋ ರಾಜ್ಯ ಸರ್ಕಾರ ಅನುಮತಿ ನೀಡಬೇಕು. ಇಲ್ಲವೇ ನ್ಯಾಯಾಲಯ ನಿರ್ದೇಶಿಸಬೇಕು ಎಂಬುದು ನಿಯಮ” ಎಂದು ಹೇಳಿದರು.

Advertisements

“ಆದರೆ, 2005 ರಲ್ಲಿ ನಾವು ಒಂದು ವಿನಾಯಿತಿ ನೀಡಿದ್ದೆವು. ಕೆಲವು ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲೆ ಕೇಸ್ ತಗೆದುಕೊಳ್ಳಲು ರಾಜ್ಯ ಸರ್ಕಾರ ಸಿಬಿಐ ಗೆ ವಿನಾಯಿತಿ ನೀಡಿತ್ತು. ಈಗ ಆ ವಿನಾಯಿತಿಯನ್ನು ನಮ್ಮ ಸರ್ಕಾರ ಹಿಂಪಡೆದಿದೆ ಅಷ್ಟೆ. ಏಕೆಂದರೆ ಕಾನೂನು ಪ್ರಕಾರ ಆ ಹಕ್ಕು ಇರುವುದು ರಾಜ್ಯ ಪೊಲೀಸರಿಗೆ ಮಾತ್ರ. ಹೀಗಾಗಿ ಈ ನಿರ್ಧಾರ ಯಾವುದೇ ಮಂತ್ರಿ ಅಥವಾ ಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ವಿಚಾರ ಅಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಮುನಿರತ್ನ ಅಪರಾಧದಲ್ಲಿ ಬಿಜೆಪಿಗರೂ ಭಾಗಿ

“ಶಾಸಕ ಮುನಿರತ್ನ ಅವರ ಎಲ್ಲ ಅಪರಾಧ ಪ್ರಕರಣಗಳನ್ನೂ ಬಿಜೆಪಿಯ ಇತರೆ ನಾಯಕರೂ ಭಾಗಿಯಾಗಿದ್ದಾರಾ? ಇದೇ ಕಾರಣಕ್ಕೆ ಎಲ್ಲರೂ ಒಟ್ಟಾಗಿ ಮುನಿರತ್ನನನ್ನು ಉಳಿಸುವ ಕೆಲಸಕ್ಕೆ ಮುಂದಾಗಿದ್ದಾರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅನುಮಾನ ವ್ಯಕ್ತಪಡಿಸಿದರು.

“ಮುನಿರತ್ನ ತನ್ನನ್ನು ವಿಕಾಸಸೌಧ ಕಚೇರಿಯಲ್ಲೇ ಅತ್ಯಾಚಾರ ಮಾಡಿದ್ದಾರೆ. ಕೆಲವು ಅತ್ಯಾಚಾರ ಪ್ರಕರಣಗಳಿಗೆ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಧೀಶರ ಎದುರು ಸೆಕ್ಷನ್ 164 ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಇದಲ್ಲದೆ, ರಾಜಕೀಯ ಹೊಂದಾಣಿಕೆ ಇಲ್ಲದ ಕಾರಣ ಅವರದ್ದೇ ಪಕ್ಷದಲ್ಲಿರುವ ಎದುರಾಳಿ ಕಾರ್ಪೊರೇಟರ್ ಪತಿಗೆ ಏಡ್ಸ್ ಸೋಂಕಿತ ಮಹಿಳೆಯ ಮೂಲಕ ಹನಿಟ್ರ್ಯಾಪ್ ಮಾಡಿಸಿ ಆತನಿಗೂ ಮಾರಕ ರೋಗ ಹರಡಿಸುವ ಯೋಜನೆ ರೂಪಿಸಿದ್ದಾರೆ. ಓರ್ವ ಐಎಎಸ್ ಅಧಿಕಾರಿ ಕೂಡ ಇವರ ಸಹಾಯ ತಗೊಂಡು ಮತ್ತೊಬ್ಬರನ್ನು ಹನಿಟ್ರ್ಯಾಪ್ ಮಾಡಲು ಮುಂದಾಗಿರುವ ಬಗ್ಗೆ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ” ಎಂದರು.

“ಈತ ಎಷ್ಟು ಜನಕ್ಕೆ ಏಡ್ಸ್ ಹಬ್ಬಿಸಿದ್ದಾರೆ. ಎಷ್ಟು ಜನರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿದ್ದಾರೆ ಗೊತ್ತಿಲ್ಲ. ವಿಕಾಸಸೌಧದಲ್ಲೂ ಅತ್ಯಾಚಾರದಂತಹ ಗಂಭೀರ ಅಪರಾಧ ಎಸಗಿದ್ದಾರೆ. ಈ ಬಗ್ಗೆ ಸ್ವತಃ ಸಂತ್ರಸ್ಥೆ ನ್ಯಾಯಾಲಯದ ಎದುರು ಹೇಳಿಕೆ ದಾಖಲಿಸಿದ್ದಾರೆ. ಇವೆಲ್ಲಾ ಗಾಳಿಯಲ್ಲಿ ಗುಂಡು ಹಾರಿಸುವ ಹಿಟ್ ಅಂಡ್ ರನ್ ಹೇಳಿಕೆಗಳಲ್ಲ. ಇವೆಲ್ಲವೂ ಸಂತ್ರಸ್ತೆ ನ್ಯಾಯಾಲಯದ ಎದುರು ನೀಡಿರುವ ಹೇಳಿಕೆ. ಆದರೆ, ಇಷ್ಟೆಲ್ಲಾ ಆಗಿದ್ರೂ ಮುನಿರತ್ನ ಅವರನ್ನು ಬಿಜೆಪಿ ಅಮಾನತು ಮಾಡಿದೆಯಾ? ಇದು ಅವರಿಗೆ ರಕ್ಷಣೆ ಹೌದ ಅಲ್ವ? ಸಂತ್ರಸ್ತೆ ನ್ಯಾಯಾಧೀಶರ ಎದುರು ನೀಡಿದ ಹೇಳಿಕೆಯೂ ಲೆಕ್ಕಕ್ಕೆ ಇಲ್ವ. ಮುನಿರತ್ನ ಅವರ ಎಲ್ಲಾ ಅಪರಾಧ ಕೆಲಸದಲ್ಲೂ ಬಿಜೆಪಿಯೂ ಭಾಗವಾಗಿರುವುದರಿಂದ ಬಿಜೆಪಿ ನಾಯಕರು ಅವರ ರಕ್ಷಣೆಗೆ ನಿಂತಿದ್ದಾರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X