ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

Date:

Advertisements
  • ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆ
  • ನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂ ಮುನಿಯಪ್ಪ

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5 ಕೆ.ಜಿ. ಉಚಿತ ಅಕ್ಕಿ ವಿತರಣೆಗೆ ನಾವು ಬೇಡಿಕೆ ಇಟ್ಟಿದ್ದೇವೆ. ಒಂದು ವೇಳೆ ನಮ್ಮ ಮನವಿಗೆ ಅವರು ಸ್ಪಂದಿಸದಿದ್ದರೆ ನಾವೇ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಘೋಷಣೆ ಮಾಡಿರುವ ರೀತಿ ಹತ್ತು ಕೆ.ಜಿ. ಅಕ್ಕಿ ವಿತರಣೆ ಮಾಡಲಿದೆ. ಇದಕ್ಕೆ ಪೂರಕವಾಗಿ ಕೇಂದ್ರ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿಗೂ ಬೇಡಿಕೆ ಇಟ್ಟಿದ್ದೇವೆ. ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಅದನ್ನವರು ಕೊಟ್ಟರೆ ಸಹಕಾರಿಯಾಗಲಿದೆ ಎಂದರು.

ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡ್ತೇವೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ನಮ್ಮ ಘೋಷಿತ ಯೋಜನೆಗಳು ಖಂಡಿತಾ ಜಾರಿಯಾಗಲಿವೆ ಎಂದು ಅವರು ಪುನರುಚ್ಚಾರ ಮಾಡಿದರು.ಪ್ರಿಯಾಂಕ್_ ಖರ್ಗೆ

Advertisements

ಇನ್ನು ಗ್ಯಾರಂಟಿ ಜಾರಿ ಬಗ್ಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಐದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ. ಇವುಗಳ ಅನುಷ್ಠಾನದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆಯಾಗಿದೆ. ಯಾವ ರೀತಿ ಗ್ಯಾರಂಟಿ ಜಾರಿ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳಿನ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? :ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ; ಸಿಎಂ ಸಿದ್ದರಾಮಯ್ಯ ಭರವಸೆ

ಯೋಜನೆ ಜಾರಿ ವಿಚಾರದ ಬಗ್ಗೆ ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷದವರು ಯಾವ ಆಧಾರದ ಮೇಲೆ ನಮ್ಮನ್ನು ಟೀಕಿಸುತ್ತಿದ್ದಾರೆ. ನಮಗೆ ಮತ ಹಾಕಿದ ಜನರ ಹಿತದೃಷ್ಟಿಯಿಂದ ನಾವು ಕೆಲಸ ಮಾಡುತ್ತಿದ್ದೇವೆ. ಯೋಜನೆ ಜಾರಿ ಮಾಡುತ್ತೇವೆ ಎಂದಿದ್ದೇವೆಯೇ ಹೊರತು, ಅದನ್ನು ಜೂನ್ 1ರಂದೇ ಮಾಡುತ್ತೇವೆಂದು ಹೇಳಿಲ್ಲ. ಈ ವಿಚಾರದಲ್ಲಿ ವೃಥಾ ಗೊಂದಲ ಸೃಷ್ಟಿ ಬೇಡ ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X