ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ‌ಸರ್ಕಾರ ಜಾಗ ನೀಡದಿರುವುದು ತಪ್ಪು ನಿರ್ಧಾರ : ಡಿ ಕೆ ಶಿವಕುಮಾರ್

Date:

Advertisements

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡದೆ ಇರುವುದು ಕೇಂದ್ರ ಸರ್ಕಾರದ ತಪ್ಪು. ಮಲ್ಲಿಕಾರ್ಜುನ ಖರ್ಗೆ ಅವರು ಕೇಳಿದ್ದರಲ್ಲಿ ತಪ್ಪಿಲ್ಲ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆಯನ್ನು ತೋರಿಸಬೇಕಾಗಿತ್ತು. ಒಳ್ಳೆಯ ಮನಸುಗಳು ಈ ಕೆಲಸಕ್ಕೆ ಹೃದಯ ಶ್ರೀಮಂತಿಕೆಯನ್ನು ತೋರಿಸಲಿ ಎಂದು ನಂಬಿದ್ದೇವೆ. ಈಗಲೂ ಕಾಂಗ್ರೆಸ್ ಪಕ್ಷದ ಬೇಡಿಕೆಗೆ ಮನ್ನಣೆ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ ಸಲ್ಲಿಸಿ ಹೊರ ಬಂದ ಬಳಿಕ ‘ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ’ ಮನವಿ ಬಗ್ಗೆ ಕೇಳಿದಾಗ ಉತ್ತರಿಸಿದರು.

“ಇತಿಹಾಸ ಮನಮೋಹನ್ ಸಿಂಗ್ ಅವರನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ. ನೀವು (ಮಾಧ್ಯಮದವರು), ವಿರೋಧ ಪಕ್ಷದವರು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ” ಎಂದು ಹೇಳುತ್ತಾ ಇದ್ದರು. ಅದು ಇಂದು ಆಗುತ್ತಿದೆ. ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮನಮೋಹನ್ ಸಿಂಗ್” ಎಂದು ಅಭಿಪ್ರಾಯಪಟ್ಟರು.

Advertisements

ಈ ಸುದ್ದಿ ಓದಿದ್ದೀರಾ? ಮನಮೋಹನ್ ಸಿಂಗ್ ಎಂಬ ‘ಕುರಿಮರಿ’ಯ ಮುಂದೆ ಸೋತಿದ್ದ ‘ಉಕ್ಕಿನ ಮನುಷ್ಯ’ ಆಡ್ವಾಣಿ

“ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣದ ಹಕ್ಕು ಕಾಯ್ದೆಗಳು ಗ್ರಾಮೀಣ ಭಾಗದ ಜನರ ಏಳಿಗೆಗೆ ಕಾರಣವಾಯಿತು. ಮಾಹಿತಿ ಹಕ್ಕು ಸೇರಿದಂತೆ ಹಲವಾರು ಯೋಜನೆಗಳು ಆಡಳಿತದಲ್ಲಿ ಪಾರದರ್ಶಕತೆ ತಂದವು. ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತರ ಯೋಜನೆ ಜಾರಿಗೆ ತಂದರು. ತಾವು ಜಾರಿಗೊಳಿಸಿದ ಅನೇಕ ಕಾಯ್ದೆಗಳ ಮೂಲಕ ಮನಮೋಹನ್ ಸಿಂಗ್ ಅವರು ಜನ ಸಾಮಾನ್ಯರ ನಡುವೆ ಇಂದಿಗೂ ಜೀವಂತವಾಗಿದ್ದಾರೆ. ಸಿಂಗ್ ಅವರು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತಂದವರು” ಎಂದು ಹೇಳಿದರು.

“ಭೂಸ್ವಾಧೀನವಾದ ನಂತರ ಅನೇಕ ರೈತರಿಗೆ ತಕ್ಕನಾದ ಪರಿಹಾರ ಸಿಗುತ್ತಿರಲಿಲ್ಲ. ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರ ನೀಡಿದರು. ಸಮಾಜದ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿದರು. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಮನಮೋಹನ್ ಸಿಂಗ್ ಅವರ ಕೆಲಸಗಳನ್ನು ಈಗ ನೆನಪಿಸಿಕೊಳ್ಳುತ್ತಿವೆ. ಸಂವಿಧಾನ ಹಾಗೂ ನಮ್ಮ ನೆಲದ ಕಾನೂನುಗಳನ್ನು ರಕ್ಷಣೆ ಮಾಡಿದವರು ಮನಮೋಹನ್ ಸಿಂಗ್. ಆರ್ಥಿಕ ಸಚಿವರಾಗಿದ್ದ ಕಾಲದಿಂದ ಇಲ್ಲಿಯತನಕ ಈ ದೇಶದ ಆರ್ಥಿಕತೆಯನ್ನು ಸುಭದ್ರವಾಗಿ ಇಡಲು ಶ್ರಮಿಸಿದರು. ಇದನ್ನು ವಿರೋಧ ಪಕ್ಷದವರು ಕೂಡ ಒಪ್ಪಿದ್ದಾರೆ” ಎಂದರು.

“ಸೋನಿಯಾ ಗಾಂಧಿ ಅವರು ತಮಗೆ ದೊರೆತ ಪ್ರಧಾನಿಯಾಗುವ ಅವಕಾಶವನ್ನು ನಿರಾಕರಿಸಿ, ಈ ದೇಶಕ್ಕೆ ಉತ್ತಮ ಆರ್ಥಿಕ ತಜ್ಞನ ಅವಶ್ಯಕತೆಯಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ನೆಹರು- ಗಾಂಧಿ ಕುಟುಂಬದ ತ್ಯಾಗವನ್ನು ಈ ದೇಶದ ಇತಿಹಾಸ ಮರೆಯುವುದಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X