ಜಾತಿಗಣತಿಗೆ ಕೇಂದ್ರ ಒಪ್ಪಿಗೆ; ಬೃಹತ್ ಗೆಲುವು ಎಂದ ವಿಪಕ್ಷಗಳು

Date:

Advertisements

ದೇಶಾದ್ಯಂತ ಜನಗಣತಿಯ ಜೊತೆಗೆ ಜಾತಿಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ತಮ್ಮ ಬೃಹತ್ ಗೆಲುವು ಎಂದು ಜಾತಿಗಣತಿಗಾಗಿ ನಿರಂತರವಾಗಿ ಒತ್ತಾಯಿಸಿದ್ದ ವಿಪಕ್ಷಗಳು ಹೇಳಿಕೊಂಡಿವೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮಿತ್ರಪಕ್ಷಗಳಾದ (ಮಹಾಘಟಬಂಧನ್) ಕಾಂಗ್ರೆಸ್‌ ಮತ್ತು ಲಾಲು ಯಾದವ್ ಅವರ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಜಾತಿಗಣತಿಗೆ ಕೇಂದ್ರ ಒಪ್ಪಿರುವುದರ ಹಿಂದೆ ತಮ್ಮ ಹೋರಾಟದ ಶ್ರಮವಿದೆ ಎಂದು ಹೇಳಿಕೊಂಡಿವೆ.

“30 ವರ್ಷಗಳ ಹಿಂದೆ ನಾವು (ಸಮಾಜವಾದಿಗಳು) ಮೀಸಲಾತಿ, ಜಾತಿ ಜನಗಣತಿ, ಸಮಾನತೆ, ಭ್ರಾತೃತ್ವ, ಜಾತ್ಯತೀತತೆ ಇತ್ಯಾದಿಗಳ ಬಗ್ಗೆ ಏನನ್ನು ಯೋಚಿಸಿದ್ದೆವೋ, ಅದನ್ನು ದಶಕಗಳ ನಂತರ ಇತರರು ಅನುಸರಿಸುತ್ತಿದ್ದಾರೆ. ಜಾತಿಗಣತಿಗೆ ಒತ್ತಾಯಿಸಿದ್ದಕ್ಕೆ ನಮ್ಮನ್ನು ‘ಜಾತಿವಾದಿಗಳು’ ಎಂದು ಕರೆದಯುತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ. ಈ ಸಂಘಿಗಳು ನಮ್ಮ ಕಾರ್ಯಸೂಚಿಗೆ ತಕ್ಕಹಾಗೆ ನೃತ್ಯ ಮಾಡುವಂತೆ ನಾವು ಮಾಡುತ್ತೇವೆ” ಎಂದು ಆರ್‌ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

“ಇದು ನಮ್ಮ ದೊಡ್ಡ ಗೆಲುವು. ಪ್ರಧಾನಿ ನರೇಂದ್ರ ಮೋದಿ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಆದರೆ, ಕೇಂದ್ರವು ಈಗ ನಮ್ಮ ಕಾರ್ಯಸೂಚಿಗೆ ತಕ್ಕಂತೆ ಕೆಲಸ ಮಾಡುತ್ತಿದೆ” ಎಂದು ಲಾಲು ಅವರ ಪುತ್ರ, ಆರ್‌ಜೆಡಿ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ಜಾತಿಗಣತಿಗೆ ಮೋದಿ ಸರ್ಕಾರ ಒಪ್ಪಿಗೆ; ರಾಹುಲ್ ಗಾಂಧಿ ಹೋರಾಟದ ಫಲ ಎಂದ ನೆಟ್ಟಿಗರು

ಕಾಂಗ್ರೆಸ್ ಕೂಡ, ಜಾತಿಗಣತಿಯು ತನ್ನ ಹೋರಾಟದ ಸುದೀರ್ಘ ವಿಷಯವಾಗಿತ್ತು. ಇದು ತಮ್ಮ ಹೋರಾಟ ಫಲ ಎಂದು ಹೇಳಿದೆ. 2024ರ ಲೋಕಸಭಾ ಚುನಾವಣೆಗೆ ಮುನ್ನ, ಆರ್‌ಜೆಡಿ ಮತ್ತು ಸಮಾಜವಾದಿ ಪಕ್ಷದಂತಹ ಪಕ್ಷಗಳು ನಡೆಸಿದ್ದ ಜಾತಿ ಜನಗಣತಿಯ ಬೇಡಿಕೆಯನ್ನು ಕಾಂಗ್ರೆಸ್ ಕೈಗೆತ್ತಿಕೊಂಡಿತು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ನಿರಂತರವಾಗಿ ಜಾತಿಗಣತಿಗಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿಗಣತಿಯನ್ನು ನಡೆಸುವುದಾಗಿ ಮತ್ತು ಮೀಸಲಾತಿಯ ಮಿತಿಯನ್ನು ಹೆಚ್ಚಿಸುವುದಾಗಿ ರಾಹುಲ್‌ ಗಾಂಧಿ ಭರವಸೆ ನೀಡಿದ್ದರು.

“ಕಾಂಗ್ರೆಸ್ ಮತ್ತು ಅದರ ಇಂಡಿಯಾ ಮೈತ್ರಿಕೂಟದ ಪಾಲುದಾರರು ಜಾತಿಗಣತಿಯನ್ನು ಕೇವಲ ರಾಜಕೀಯ ಸಾಧನವಾಗಿ ಬಳಸಿಕೊಂಡಿದ್ದಾರೆ. 2010ರಲ್ಲಿ ಜಾತಿಗಣತಿಗೆ ಸಂಪುಟ ಅನುಮೋದನೆ ಪಡೆದಿದ್ದರೂ ಸಹ ಹಿಂದಿನ ಯುಪಿಎ ಸರ್ಕಾರ ಜನಗಣತಿಯ ಬದಲು ಜಾತಿ ಸಮೀಕ್ಷೆಯನ್ನು ನಡೆಸಿತು” ಎಂದು ಸಚಿವ ಅಶ್ವಿನ್ ವೈಷ್ಣವ್ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X