ಚೈತ್ರಾಳಿಗೆ ಯಾವುದೇ ‘ಫಿಟ್ಸ್’ ರೋಗ ಇಲ್ಲ: ಡಾ.ಅಸೀಮಾ ಬಾನು ಸ್ಪಷ್ಟನೆ

Date:

Advertisements
  • ಸಾಬೂನು ನೊರೆ ಬಾಯಲ್ಲಿ ಬರಿಸಿ ಮೂರ್ಛೆ ಬಂದಂತೆ ನಟನೆ!
  • ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಮೂರ್ಛೆ ರೋಗದ ನಾಟಕ?

ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದಂತಾಗಿ ಕುಸಿದು ಬಿದ್ದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ‘ಚೈತ್ರಾ ಅವರಿಗೆ ಫಿಟ್ಸ್ ಇಲ್ಲ, ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ಅಸೀಮಾ ಬಾನು, “ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ. ಸಿಟಿ ಸ್ಕ್ಯಾನ್, ಇಸಿಜಿ ಎಲ್ಲವೂ ನಾರ್ಮಲ್ ಇದೆ. ಈವರೆಗೆ ನಡೆಸಿದ ಎಲ್ಲ ಪರೀಕ್ಷೆಯಲ್ಲೂ ನಾರ್ಮಲ್ ಇದೆ. ಮೊದಲು ಮೂರ್ಛೆ ರೋಗ ಇತ್ತು ಎಂದು ಮಾಹಿತಿ ಇದೆ. ಆದರೆ ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದೇವೆ. ಎಲ್ಲ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಬಟ್ಟೆ ತೊಳೆಯಲು ಸಿಸಿಬಿ ಪೊಲೀಸರಲ್ಲಿ ಸಾಬೂನು ಕೇಳಿದ್ದ ಚೈತ್ರಾ ಕುಂದಾಪುರ
ಯಾವುದೇ ನೊರೆ ಬಾಯಲ್ಲಿ ಇರಲಿಲ್ಲ ಎಂದು ವೈದ್ಯೆ ಡಾ.ಅಸೀಮಾ ಬಾನು ತಿಳಿಸಿದ ನಂತರ, ಚೈತ್ರಾ ಸಾಬೂನು ನೊರೆ ಬಾಯಿಗೆ ಹಾಕಿ ಮೂರ್ಛೆ ಬಂದಂತೆ ನಟನೆ ಮಾಡಿರುವ ಸಂಗತಿ ಈಗ ಚರ್ಚೆಗೆ ಗ್ರಾಸವಾಗಿದೆ.

Advertisements

ಬಟ್ಟೆ ತೊಳೆಯಲು ಕೊಟ್ಟ ಸಾಬೂನನ್ನು ಬಾಯಿಗೆ ಹಾಕಿ ನೊರೆ ಬರಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಯಲ್ಲಿರುವ ಶೌಚಾಲಯವನ್ನು ಪೊಲೀಸರು ಪರಿಶೀಲನೆ ನಡೆಸಿರುವುದಾಗಿ ವರದಿಯಾಗಿದೆ.

ಅಲ್ಲದೇ, ಆಸ್ಪತ್ರೆಗೆ ಪೊಲೀಸರು ದಾಖಲಿಸಲು ಕರೆತಂದ ವೇಳೆ ತನ್ನ ಬಟ್ಟೆಯನ್ನು ತಾನೇ ಸರಿಪಡಿಸಿಕೊಳ್ಳುತ್ತಿರುವ ದೃಶ್ಯಗಳು ಕೆಲ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಿಸಿಬಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಚೈತ್ರಾ ಈ ರೀತಿಯ ಮೂರ್ಛೆ ರೋಗದ ನಾಟಕವಾಡಿದ್ದಾರೆ ಎಂಬ ಅನುಮಾನ ಹುಟ್ಟಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X