ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್: ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

Date:

Advertisements

“ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು‌ ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ” ಎಂದು ವ್ಯಂಗ್ಯವಾಡಿದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಯವರು ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್ ಎಂದಿದ್ದಾರೆ.

“ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು’ ಎಂದು ಸಚಿವ ಚಲುವರಾಯಸ್ವಾಮಿ ಅವರನ್ನು ಟೀಕಿಸಿದ್ದರು. 

ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿರುವ ಕೃಷಿ ಸಚಿವರ ಸವಾಲಿಗೆ ಪ್ರತಿಕ್ರಿಯಿಸಿ, “ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಎಂಎಲ್‌ಎಗಳು ಆ ವ್ಯಕ್ತಿಯನ್ನು ನೋಡಿ ಬಂದ್ರಾ? ಆ ವ್ಯಕ್ತಿಯನ್ನು ಮಂತ್ರಿ ಮಾಡಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಬೆಳಗಿನ ಜಾವ ಮೂರು ಗಂಟೆವರೆಗೆ ನಿದ್ರೆ ಮಾಡಲು ಬಿಡುತ್ತಿರಲಿಲ್ಲ ಆ ಆಸಾಮಿ” ಎಂದು ಕೊಂಕು ಮಾತನಾಡಿದ್ದರು. 

Advertisements

ಈ ಸುದ್ದಿ ಓದಿದ್ದೀರಾ? ಎಐಸಿಸಿ ಅಧಿವೇಶನಕ್ಕೆ ಗೈರಾಗಲಿರುವ ಪ್ರಿಯಾಂಕಾ ಗಾಂಧಿ

“ಆ ವ್ಯಕ್ತಿಗೆ ಇರುವ ಚಟ ನನಗೆ ಇಲ್ಲ. ಮಂಡ್ಯದಲ್ಲಿ ಆತನ ಚಟಗಳ ಬಗ್ಗೆ ಕೇಳಿದರೆ ಜನ ಹಾದಿ ಬೀದಿಯಲ್ಲಿ ಹೇಳುತ್ತಾರೆ. ಈ ಮನುಷ್ಯ ಎಷ್ಟು ಮನೆ ಹಾಳುಮಾಡಿದ್ದಾರೆ ಎಂಬುದು ನನಗೆ ಗೊತ್ತು” ಎಂದು ಹರಿಹಾಯ್ದಿದ್ದರು.  

ಮೈತ್ರಿ ಭದ್ರವಾಗಿದೆ, ಸಮಸ್ಯೆ ಇಲ್ಲ: ಎಚ್‌ಡಿಕೆ

‘ಜೆಡಿಎಸ್‌-ಬಿಜೆಪಿ ಮೈತ್ರಿ ಭದ್ರವಾಗಿದೆ. ಯಾರಿಗೂ ಸಂಶಯ ಬೇಡ. ಜೆಡಿಎಸ್‌-ಬಿಜೆಪಿ‌ ಮೈತ್ರಿ ಸಮನ್ವಯ ಸಮಿತಿ ರಚನೆ ಆಗಬೇಕೆಂದು ಡಿ ವಿ ಸದಾನಂದಗೌಡರೇ ಹೇಳಿದ್ದಾರೆ. ಹಲವಾರು ಹಿರಿಯ ನಾಯಕರೂ ಸಮನ್ವಯ ಸಮಿತಿ ಆಗಬೇಕೆಂದು ಸಲಹೆ ಮಾಡಿದ್ದಾರೆ. ಮೈತ್ರಿಗೆ ಯಾವುದೇ ರೀತಿಯ ಧಕ್ಕೆ ಇಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X