ಚಂಡೀಗಢ | ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಕುತಂತ್ರ ಎಂದ ಎಎಪಿ-ಕಾಂಗ್ರೆಸ್‌

Date:

Advertisements

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಗುರುವಾರ ನಡೆಯಬೇಕಿದ್ದ ಬಹುನಿರೀಕ್ಷಿತ ಚುನಾವಣೆಯನ್ನು ನಾಮನಿರ್ದೇಶಿತ ಅಧ್ಯಕ್ಷರ ‘ಅನಾರೋಗ್ಯ’ ಕಾರಣ ನೀಡಿ ಮುಂದೂಡಲಾಗಿದೆ. ಚುನಾವಣೆ ಮುಂದೂಡಿಕೆಯನ್ನು ಬಿಜೆಪಿಯ ಕುತಂತ್ರವೆಂದು ಕಾಂಗ್ರೆಸ್‌ ಮತ್ತು ಎಎಪಿ ಆರೋಪಿಸಿವೆ.

ಪಾಲಿಕೆಯಲ್ಲಿ 13 ಸ್ಥಾನಗಳನ್ನು ಹೊಂದಿರುವ ಎಎಪಿ ಮತ್ತು 7 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನಕ್ಕೆ ಹೋರಾಟ ನಡೆಸುತ್ತಿವೆ. ಈ ನಡುವೆ, ಚುನಾವಣೆ ಮುಂದೂಡಲಾಗಿದ್ದು, ಇದರ ವಿರುದ್ಧ ಪಾಲಿಕೆ ಕಟ್ಟಡದ ಬಳಿ ಎಎಪಿ-ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಪವನ್ ಕುಮಾರ್ ಬನ್ಸಾಲ್, ”ಬಿಜೆಪಿಗೆ ತಾವು ಸೋಲುತ್ತೇವೆ ಎಂದು ತಿಳಿದಿತ್ತು. ಅದಕ್ಕಾಗಿಯೇ ಅವರು ಈ ತಂತ್ರ ಹೆಣೆದಿದ್ದಾರೆ. ಅವರು ನ್ಯಾಯಯುತವಾಗಿದ್ದರೆ, ಅಧ್ಯಕ್ಷರು ಅನಾರೋಗ್ಯಕ್ಕೆ ಒಳಗಾಗಿದ್ದರೆ, ಅವರ ಸ್ಥಾನಕ್ಕೆ ಬೇರೊಬ್ಬರನ್ನು ತಕ್ಷಣವೇ ನೇಮಿಸಿ ಚುನಾವಣೆ ನಡೆಸುತ್ತಿದ್ದರು” ಎಂದು ಕಿರಿಕಾರಿದ್ದಾರೆ.

Advertisements

“ಇದು ಬಿಜೆಪಿಯ ಗಿಮಿಕ್. ನಾವು ಹೈಕೋರ್ಟ್‌ಗೆ ಹೋಗುತ್ತೇವೆ. ನ್ಯಾಯಾಲಯದಿಂದ ನ್ಯಾಯ ಪಡೆಯುತ್ತೇವೆ. ಈ ಸಣ್ಣ ಚುನಾವಣೆಯಲ್ಲಿ ಬಿಜೆಪಿಯು ನಮ್ಮ ಮೈತ್ರಿಯ ಬಗ್ಗೆ ಭಯಪಡುತ್ತಿದೆ ಎಂದರೆ, ರಾಷ್ಟ್ರೀಯ ಮಟ್ಟದ ಮೈತ್ರಿಯ ಬಗ್ಗೆ ಯಾವ ಹಂತಕ್ಕೆ ಭಯಪಟ್ಟಿರಬಹುದು” ಎಂದು ಎಎಪಿ ನಾಯಕ, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೇಳಿದ್ದಾರೆ.

35 ಸ್ಥಾನಗಳನ್ನು ಹೊಂದಿರುವ ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 14 ಸದಸ್ಯರನ್ನು ಹೊಂದಿದೆ. ಎಎಪಿ 13 ಹಾಗೂ ಕಾಂಗ್ರೆಸ್‌ 7 ಸದಸ್ಯರನ್ನು ಹೊಂದಿವೆ. ಅಲ್ಲದೆ, ಎಸ್‌ಎಡಿಯ ಒಬ್ಬರು ಸದಸ್ಯರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X