ಲೋಕಸಭಾ ಚುನಾವಣೆ ಹೇಗೆ ನಡೆಯುತ್ತದೆ ಎಂಬುದಕ್ಕೆ ಚಂಡೀಗಢ ಸಾಕ್ಷಿ: ಮಲ್ಲಿಕಾರ್ಜುನ ಖರ್ಗೆ

Date:

Advertisements

ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಎಲ್ಲರಿಗೂ ಸಮತಟ್ಟಾದ ಮೈದಾನ ಸಿಗಬೇಕು. ಹೆದರಿಸಿ, ಬೆದರಿಸಿ ಪಕ್ಷಕ್ಕೆ ಸೇರಿಸಿಕೊಳ್ಳುವುದರಿಂದ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಲೋಕಸಭಾ ಚುನಾವಣೆ ಹೇಗೆ ನಡೆಯಬಹುದು ಎಂಬುದದನ್ನು ಚಂಡೀಗಢ ಮೇಯರ್ ಚುನಾವಣೆ ಸೂಚಿಸುತ್ತಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಚುನಾವಣೆ ಆಯೋಗದ ಕಚೇರಿಯಿಂದ ಚಂಡೀಗಢಕ್ಕೆ ಒಂದು ಗಂಟೆ ಪ್ರಯಾಣ. ಅಷ್ಟು ಅನತಿ ದೂರದಲ್ಲಿರುವ ನಗರದ ಮೇಯರ್ ಚುನಾವಣೆಯಲ್ಲಿ ಚುನಾವಣಾ ಕೆಲಸಕ್ಕೆ ಬಂದ ಅಧಿಕಾರಿಯೇ ಮತ ಚಲಾಯಿಸಿದ್ದಾನೆ ಎಂದರೆ, ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಸರ್ಕಾರ ಗ್ರಾಮೀಣ ಭಾಗಗಳಲ್ಲಿ ಏನೆಲ್ಲ ಮಾಡುತ್ತಿರಬಹುದು ಎಂಬದನ್ನು ಅಂದಾಜಿಸಲು ಈ ಉದಾಹರಣೆ ಸಾಕು” ಎಂದು ಹೇಳಿದ್ದಾರೆ.

“ಹದರಿಸಿ, ಬೆದರಿಸಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಳಿ ಇದ್ದಾಗ ಭ್ರಷ್ಟರು ಎನ್ನುತ್ತಾರೆ. ಬಳಿಕ ಅವರನ್ನೇ ಪಕ್ಷಕ್ಕೆ ಎಳೆದುಕೊಂಡು ಪ್ರಮಾಣಿಕರು ಎನ್ನುತ್ತಾರೆ. ದೇಶದಲ್ಲಿ ನಿರಂಕುಶ ನಾಯಕತ್ವ ಮತ್ತು ಸರ್ವಾಧಿಕಾರ ಆಡಳಿತ ತರಲು ಮೋದಿ ಹವಣಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಕೆಲವರು ಮೋದಿ ಇದ್ದರೆ ಮಾತ್ರ ದೇಶ ನಡೆಯುತ್ತದೆ ಎಂಬ ಗುಂಗಿನಲ್ಲಿದ್ದಾರೆ. ಹಲವಾರು ನಾಯಕರು ದೇಶ ಕಟ್ಟಿದ್ದಾರೆ. ಆದರೆ, ಮೋದಿಯವರನ್ನು ಜಾಹೀರಾತು ಸರ್ಕಾರ. ಅವರೇನು ಮಾಡುತ್ತಿಲ್ಲ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು,...

Download Eedina App Android / iOS

X