ದೇಶದ ಹೆಸರಲ್ಲ, ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements
  • ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪ್ಪಟ್ಟಾಯಿತೇ? ಎಂದು ಕೇಳಿದ ಡಿಸಿಎಂ
  • ಬದಲಾವಣೆಯಿಂದ ಏನೂ ಲಾಭವಿಲ್ಲ, ಆಚಾರ-ವಿಚಾರ ಬದಲಾಗಬೇಕು

“ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ? ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನ ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮದ ಪ್ರತಿನಿಧಿಗಳು ‘ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆ’ ಕೇಳಿದಾಗ ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.

“ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ ಒಂಭತ್ತು ವರ್ಷಗಳಲ್ಲಿ ಜನರ ಆದಾಯ ದುಪ್ಪಟ್ಟಾಯಿತೇ? 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ?” ಎಂದು ಪ್ರಶ್ನಿಸಿದರು.

Advertisements

“ಶ್ರೀಮಂತರು, ದೊಡ್ಡ ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್ಪೋರ್ಟ್‌ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು” ಎಂದು ದೇಶದ ಹೆಸರು ಬದಲಾವಣೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಮೇಕೆಗೂ ರೈಲು ಪ್ರಯಾಣದ ಟಿಕೆಟ್ ತೆಗೆದುಕೊಂಡಿದ್ದ ಬಡ ವೃದ್ಧೆ: ಮೆಚ್ಚಿದ ನೆಟ್ಟಿಗರು, ವಿಡಿಯೋ ವೈರಲ್

“ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿ ಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಯಾಕೆ ಬರುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X