ಹುಬ್ಬಳ್ಳಿ-ಧಾರವಾಡದಂತೆ ಚನ್ನಪಟ್ಟಣ-ರಾಮನಗರ ಅಭಿವೃದ್ಧಿ: ಹೆಚ್‌ ಡಿ ಕುಮಾರಸ್ವಾಮಿ

Date:

Advertisements

ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಚನ್ನಪಟ್ಟಣ ಕ್ಷೇತ್ರದ ನೀಲಕಂಠನಹಳ್ಳಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, “ಅವಳಿ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಪರಿವರ್ತಿಸಲಾಗುವುದು. ಇದರಿಂದ ಈ ಭಾಗದ ಆರ್ಥಿಕತೆಗೆ ಶಕ್ತಿ ಬರುವುದರ ಜತೆಗೆ ಜನಜೀವನ ಮಟ್ಟವೂ ಸುಧಾರಿಸುತ್ತದೆ. ಅಭಿವೃದ್ಧಿ ಮಾಡುವುದು ಎಂದರೆ ಯಾವುದೇ ದುರುದ್ದೇಶಕ್ಕೆ ಬೆಂಗಳೂರಿಗೆ ಸೇರುವುದಲ್ಲ. ಆಯಾ ಪ್ರದೇಶಗಳನ್ನು ಆಯಾ ಬೌಗೋಳಿಕ ವ್ಯಾಪ್ತಿಯಲ್ಲಿಯೇ ವಿಸ್ತೃತವಾಗಿ ಅಭಿವೃದ್ಧಿ ಮಾಡುವುದು” ಎಂದು ಪರೋಕ್ಷವಾಗಿ ವಿರೋಧಿಗಳಿಗೆ ಕುಟುಕಿದರು.

ಕಮೀಶನ್ ದುರಾಸೆಗೆ ಯುಜಿಡಿ ಯೋಜನೆ ನೆನೆಗುದಿಗೆ

Advertisements

“ಚನ್ನಪಟ್ಟಣ ಕ್ಷೇತ್ರದಲ್ಲಿ ಒಳಚರಂಡಿ ವ್ಯವಸ್ಥೆ ಆಗಿಲ್ಲ. ನಾನು ಸಿಎಂ ಆಗಿದ್ದಾಗ ಯೋಜನೆಗೆ ಒಪ್ಪಿಗೆ ನೀಡಿದ್ದೆ. ₹97 ಕೋಟಿ ಹಣ ಬಿಡುಗಡೆಯಾಗಿ ಮೂರು ವರ್ಷವಾಗಿದೆ. ಟೆಂಡರ್ ಕರೆದು ಹಣ ಬಿಡುಗಡೆ ಮಾಡಿದರೆ ಕೆಲಸ ಆಗುತ್ತಿದೆ. ಅದನ್ನು ಮಾಡುವುದು ಬಿಟ್ಟು ಗುತ್ತಿಗೆದಾರರಿಗೆ ‘ಮನೆ ಹತ್ತಿರ ಬಂದು ನೋಡಿ’ ಎಂದು ತಾಕೀತು ಮಾಡುತ್ತಿದ್ದಾರೆ. ಅವರ ಕಮೀಶನ್ ದುರಾಸೆಗೆ ಯುಜಿಡಿ ಯೋಜನೆ ನೆನೆಗುದಿಗೆ ಬಿದ್ದಿದೆ” ಎಂದು ಕುಮಾರಸ್ವಾಮಿ ದೂರಿದರು.

ಗಾರ್ಮೆಂಟ್ಸ್ ಕಾರ್ಖಾನೆಗೆ ಸ್ಥಾಪನೆ

“ನೀಲಕಂಠನಹಳ್ಳಿ ಗ್ರಾಮದ ಹೆಣ್ಣು ಮಕ್ಕಳು ಗಾರ್ಮೆಂಟ್ಸ್ ಕಾರ್ಖಾನೆ ಬೇಕೆಂದು ಕೇಳಿದ್ದಾರೆ. ಅವರ ಮನವಿ ನಾನು ಸ್ಪಂದಿಸುತ್ತೇನೆ. ಹೆಣ್ಣು ಮಕ್ಕಳಿಗೆ ಟೈಲರಿಂಗ್ ತರಬೇತಿ ಕೊಡಿಸಿ, ಗಾರ್ಮೆಂಟ್ಸ್ ಕಾರ್ಖಾನೆ ಸ್ಥಾಪನೆ ಮಾಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಪ್ರಯತ್ನ ಮಾಡುತ್ತೇನೆ” ಎಂದರು.

ದಲಿತರನ್ನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎತ್ತಿಕಟ್ಟುವ ಹೀನ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಅಂಬೇಡ್ಕರ್ ಅವರನ್ನು ಎರಡು ಸಾಲ ಸೋಲಿಸಿ ಅವರನ್ನು ರಾಜಕೀಯವಾಗಿ ನಿರ್ನಾಮ ಮಾಡಿದ್ದು ಕಾಂಗ್ರೆಸ್. ಆದರೆ, ಮೋದಿ ಅವರು ಅಂಬೇಡ್ಕರ್ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲು ಸಂಕಲ್ಪ ತೊಟ್ಟಿದ್ದಾರೆ. ಸಂವಿಧಾನ ಅಂಗೀಕರಿಸಲಾದ ನವೆಂಬರ್ 26ನೇ ತಾರೀಖನ್ನು ಶಾಶ್ವತವಾಗಿ ಸಂವಿಧಾನ ದಿನವನ್ನಾಗಿ ಆಚರಿಸಲು ಅವರು ನಿರ್ಧಾರ ಮಾಡಿದ್ದಾರೆ” ಎಂದು ಹೇಳಿದರು.

ಮೈಸೂರು ಕೊಡಗು ಸಂಸದ ಯದುವೀರ್ ಕೃಷದತ್ತ ಒಡೆಯರ್, ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕರಾದ ಡಾ.ಅನ್ನದಾನಿ, ಚೌಡರೆಡ್ಡಿ ತೂಪಲ್ಲಿ, ನಿಸರ್ಗ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಸೇರಿದಂತೆ ಅನೇಕ ನಾಯಕರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X