ಖಾಸಗಿ ಶಾಲೆ, ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪರಿಶೀಲಿಸಲು ಸಚಿವ ಶಿವರಾಜ್‌ ತಂಗಡಗಿ ಸೂಚನೆ

Date:

  • ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಸಚಿವರು
  • ಕನ್ನಡ ಅನುಷ್ಠಾನದ ವಿಧೇಯಕದ ನಿಯಮ ಶೀಘ್ರ ಜಾರಿಗೆ ಸೂಚನೆ

ರಾಜ್ಯದಲ್ಲಿನ ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪ್ರಗತಿ ಪರಿಶೀಲಿಸಿ ಶೀಘ್ರ ವರದಿ ಸಲ್ಲಿಸುವಂತೆ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಕನ್ನಡ ಸಂಸ್ಕೃತಿ ಇಲಾಖೆ ಕೇಂದ್ರ ಕಚೇರಿ, ಕನ್ನಡ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಕನ್ನಡ ಭಾಷೆಯ ಅಸ್ಮಿತೆ ಜೊತೆಗೆ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಕರೆ ನೀಡಿದರು.

ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಿ, ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಮಟ್ಟದ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿಸುವಂತೆ ರೂಪುರೇಷೆ ಸಿದ್ಧಪಡಿಸಿ ಅದನ್ನು ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂದು ಸೂಚಿಸಿದರು. ಈ ಉತ್ಸವಗಳ ಮೂಲಕ ಪ್ರತೀ ಜಿಲ್ಲೆಯ ಜೀವಂತಿಕೆ ಉಳಿಸಬೇಕು, ಹಾಗೆಯೇ ಇದಕ್ಕೆ ಪೂರಕವಾಗಿ ಪ್ರವಾಸೋದ್ಯಮ ಇಲಾಖೆಯ ಸಹಯೋಗ ಪಡೆಯಬೇಕೆಂದು ಹೇಳಿದರು.

ಇದೇ ವೇಳೆ ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಖಾಸಗೀ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸುವುದರ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಇಲಾಖೆಗಳು ಪರಿಶೀಲನೆ ನಡೆಸಬೇಕು. ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ದೊರಕಿಸಬೇಕಾದ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಚ್ಚು ಶ್ರಮ ವಹಿಸಬೇಕು. ಅದಕ್ಕೆ ಸರ್ಕಾರದಿಂದ ಬೇಕಾದ ಕಾನೂನಾತ್ಮಕ ನೆರವನ್ನು ಒದಗಿಸಲು ಶೀಘ್ರದಲ್ಲಿ ಸಂಬಂಧಪಟ್ಟವರ ಸಭೆ ಕರೆಯಲಾಗುವುದೆಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬೆಂಗಳೂರು ಅಭಿವೃದ್ಧಿಗಾಗಿ ಮಾಜಿ ಮೇಯರ್‌ಗಳ ಸಲಹೆ ಪಡೆದಿರುವೆ: ಡಿಸಿಎಂ ಶಿವಕುಮಾರ್‌

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲು ಕ್ರಮವಹಿಸಲಾಗುವುದು ಎಂದ ಅವರು ತಮ್ಮ ಭೇಟಿ ವೇಳೆ ಹಾರ ತುರಾಯಿ ಬದಲು ಪುಸ್ತಕ ನೀಡಿ, ನಾನದನ್ನು ಓದುವ ಮಕ್ಕಳಿಗೆ ಅಥವಾ ಗ್ರಂಥಾಲಯಕ್ಕೆ ನೀಡುವೆ. ಇದರ ಮೂಲಕ ಪುಸ್ತಕ ಪ್ರಕಾಶಕರಿಗೆ, ಮಾರಾಟಗಾರರಿಗೆ ಹಾಗೂ ಸಾಹಿತಿಗಳಿಗೆ ನೆರವಾಗುವುದಲ್ಲದೆ ಪುಸ್ತಕೋದ್ಯಮದ ಬೆಳವಣಿಗೆಗೂ ಅನುಕೂಲವಾಗುತ್ತದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...