ರಾಮನಗರದ ವೈದ್ಯಕೀಯ ಕಾಲೇಜಿಗೆ ಕೆಂಗಲ್ ಹನುಮಂತಯ್ಯ ಹೆಸರು: ಸಿಎಂ ಬೊಮ್ಮಾಯಿ

Date:

  • ರಾಮನಗರದ ಬಡವರ ಚಿಕಿತ್ಸೆಗೆ ಇದು ದೊಡ್ಡ ಸಂಸ್ಥೆಯಾಗಲಿದೆ
  • 180 ಕೋಟಿ ರೂಗಳ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಸಿಎಂ ಅಡಿಗಲ್ಲು

ರಾಮನಗರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ಭಾಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಹನುಮಂತಯ್ಯ ಅವರ ಹೆಸರನ್ನು ವೈದ್ಯಕೀಯ ಕಾಲೇಜಿಗೆ ಇಡಲಾಗುವುದು ಎಂದು ಸಿಎಂ ಹೇಳಿದರು. ಅದಕ್ಕೂ ಮೊದಲು ಈ ಕುರಿತು ಸಿಂಡಿಕೇಟ್ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ಇಲ್ಲಿಗೆ ಒಂದು ಸಾವಿರ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಬರಲಿದೆ.

ರಾಮನಗರದ ಬಡವರ ಚಿಕಿತ್ಸೆಗೆ ದೊಡ್ಡ ಸಂಸ್ಥೆಯಾಗಲಿದೆ. ಸಂಶೋಧನೆಗಳು ದೊಡ್ಡ ಪ್ರಮಾಣದಲ್ಲಿ ಆಗಲಿದೆ. ಇದು ಭಾರತದ ದೇಶದಲ್ಲಿಯೇ ದೊಡ್ಡ ಆರೋಗ್ಯ ಕೇಂದ್ರವಾಗಲಿದೆ ಎಂದು ಸಿಎಂ ನುಡಿದರು.

ಬಿಡದಿ, ಮಾಗಡಿಯನ್ನು ಮೆಟ್ರೋ ಮೂಲಕ ಬೆಂಗಳೂರಿಗೆ ಜೋಡಿಸಬೇಕು;
ಇಂಟಿಗ್ರೇಟೆಡ್ ಟೌನ್ ಶಿಪ್ ಕೆಲಸ ಈ ವರ್ಷದಿಂದ ಪ್ರಾರಂಭವಾಗಲಿದೆ. ಇದರ ಭಾಗವಾಗಿ ಬಿಡದಿ ಹಾಗೂ ಮಾಗಡಿಯವರೆಗೆ ಮೆಟ್ರೋ ಮಾರ್ಗವನ್ನು ವಿಸ್ತರಿಸಿ ರಾಮನಗರವನ್ನು ಬೆಂಗಳೂರಿಗೆ ಜೋಡಿಸುವ ಕೆಲಸವಾಗಬೇಕು ಎಂದು ಸಿಎಂ ಹೇಳಿದರು.

ಈ ಸುದ್ದಿ ಓದಿದ್ದೀರಾ? :ಡಾ.ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರೇಷ್ಮೆ ಮಾರುಕಟ್ಟೆಗೆ ಅಡಿಗಲ್ಲು;
ರಾಮನಗರದಲ್ಲಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಅಡಿಗಲ್ಲು ಹಾಕಲಾಗಿದೆ. ಇಷ್ಟು ಬೃಹತ್ ರೇಷ್ಮೆ ಮಾರುಕಟ್ಟೆ ರಾಜ್ಯದಲ್ಲಿ ಎಲ್ಲೂ ಇಲ್ಲ. ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆ ನಿಯಂತ್ರಣ ಕೈಗೆ ಬರಲಿದೆ ಎಂದರು.

ಹಾಗೆಯೇ ಮಾವಿನ ಸಂಸ್ಕರಣಾ ಘಟಕಗಳಿಗೆ ಚಾಲನೆ ನೀಡಲಾಗಿದ್ದು, 160 ಕೋಟಿ ಮೊತ್ತದ ಹೊಸ ಕಾಮಗಾರಿಯನ್ನು ಪ್ರಾರಂಭ ಮಾಡಲಾಗಿದೆ ಎಂದು ಸಿಎಂ ಹೇಳಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಾಂಗ್ಲಿಯಿಂದ ಶಿವಸೇನೆ ಸ್ಪರ್ಧೆ; ಬಿಜೆಪಿಗೆ ನೆರವು ನೀಡದಂತೆ ಸಂಜಯ್ ರಾವತ್ ಕರೆ

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು...

ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ: ಪ್ರಲ್ಹಾದ್‌ ಜೋಶಿ

ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ...