ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್ ಸೆ. 19ಕ್ಕೆ ಶನಿವಾರದಂದು ಭೇಟಿ ನೀಡಲಿದ್ದಾರೆ.

- Advertisement -

ಸೆ. 19ರಂದು ಬೆಳಿಗ್ಗೆ 6:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಈ ವಿಶೇಷ ಸಂಚಾರ ನಿಯಮಗಳು ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಜೆ.ಸಿ.ಐ ಸರ್ಕಲ್‌ನಲ್ಲಿ ನಿಲ್ಲಿಸುವ ಗೂಡ್ಸ್ ವಾಹನಗಳು, ಬಾಳೆಹೊನ್ನೂರು ಪೊಲೀಸ್ ಠಾಣೆಯ ಪಕ್ಕ ಹಾಗೂ ಮಾರ್ಕೆಟ್ ರಸ್ತೆಯ ಪ್ಯಾಸೆಂಜರ್ ಆಟೋ ರಿಕ್ಷಾಗಳ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ. ಬಾಳೆಹೊನ್ನೂರು ಬಸ್ ನಿಲ್ದಾಣದ ಆರ್ಚ್‌ (ಕಮಾನು) ಮುಂಭಾಗದಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.  ಅದೇ ರೀತಿ ಜೆ.ಸಿ.ಐ ಸರ್ಕಲ್‌ನಿಂದ ಭದ್ರಾ ಕ್ಲಬ್ ವರೆಗೆ, ಸೌಂದರ್ಯ ಹೋಟೆಲ್ ತಿರುವಿನಿಂದ ಭದ್ರಾ ಕ್ಲಬ್ ವರೆಗೆ ಹಾಗೂ ಜೆ.ಸಿ.ಐ ಸರ್ಕಲ್‌ನಿಂದ ನರಸಿಂಹರಾಜಪುರ ರಸ್ತೆಯ ಕಡ್ಲೆಮಕ್ಕಿ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಪಾರ್ಕಿಂಗ್ ಸಂಪೂರ್ಣ ನಿರ್ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ  ಕಾರ್ಯಕ್ರಮ ಹಾಗೂ ಪಟ್ಟಣಕ್ಕೆ ಆಗಮಿಸುವ ಸಾರ್ವಜನಿಕರು ತಮ್ಮ ವಾಹನಗಳನ್ನು ಶ್ರೀ ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಿಲುಗಡೆ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ವಿವಿಧ ಭಾಗಗಳಿಂದ ಪಟ್ಟಣಕ್ಕೆ ಪ್ರವೇಶಿಸುವ ಪ್ರಯಾಣಿಕರ ಬಸ್ಸುಗಳ ಸಂಚಾರಕ್ಕೂ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಲಾಗಿದೆ. ಚಿಕ್ಕಮಗಳೂರು ಮತ್ತು ಆಲ್ಲೂರಿನಿಂದ ಬರುವ ಬಸ್ಸುಗಳು ಪ್ರಯಾಣಿಕರನ್ನು ಬಸ್‌ ನಿಲ್ದಾಣದಲ್ಲಿ ಇಳಿಸಿ, ನಂತರ ಖಾಲಿ ಬಸ್ಸುಗಳನ್ನು ಭದ್ರಾ ಕ್ಲಬ್ ಬಳಿ ರಸ್ತೆಯ ಒಂದು ಬದಿಯಲ್ಲಿ ಪಾರ್ಕಿಂಗ್ ಮಾಡಬೇಕು. ಕಳಸ ಕಡೆಯಿಂದ ಬರುವ ಬಸ್ಸುಗಳು ನಿಲ್ದಾಣದಲ್ಲಿ ಜನರನ್ನು ಇಳಿಸಿದ ಬಳಿಕ ಕಳಸ ರಸ್ತೆಯ ಒಂದು ಬದಿಯಲ್ಲಿ ನಿಲ್ಲಿಸಬೇಕಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಕೊಪ್ಪ ಕಡೆಯಿಂದ ಮೇಲ್ಪಾಲ್ ಮಾರ್ಗವಾಗಿ ಬರುವ ಬಸ್ಸುಗಳು ರಂಭಾಪುರಿ ಮಠದ ಮೇಲ್ಪಾಲ್ ರಸ್ತೆಯಲ್ಲಿ, ಜಯಪುರ ಮಾರ್ಗದಿಂದ ಬರುವ ಬಸ್ಸುಗಳು ಕೊಪ್ಪ ರಸ್ತೆಯ ಒಂದು ಬದಿಯಲ್ಲಿ ಹಾಗೂ ನ.ರಾ. ಪುರ ಕಡೆಯಿಂದ ಬರುವ ಬಸ್ಸುಗಳು ನಾರಾಯಣ ಗುರು ಸಮುದಾಯ ಭವನದ ಆವರಣದಲ್ಲಿ ಖಾಲಿ ಬಸ್ಸುಗಳನ್ನು ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ. ಪಟ್ಟಣದಲ್ಲಿ ಯಾವುದೇ ರೀತಿಯ ಸಂಚಾರ ದಟ್ಟಣೆ ಹಾಗೂ ಅಡಚಣೆ ಉಂಟಾಗದಂತೆ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಯ ಮಾರ್ಗದರ್ಶನ ಮತ್ತು ಸೂಚನೆಗಳನ್ನು ಸಾರ್ವಜನಿಕರು ತಪ್ಪದೆ ಪಾಲಿಸಿ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಸ್ಥಳೀಯ ಪೊಲೀಸ್‌ ಇಲಾಖೆಯು ಸಂಚಾರ ಮಾರ್ಗ ಬದಲಾವಣೆ ಹಾಗೂ ಪಾರ್ಕಿಂಗ್ ನಿರ್ಬಂಧಗಳನ್ನು ವಿಧಿಸಿ ಪ್ರಕಟಣೆ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು, ನೆರವಾಗುವುದೇ ಸರ್ಕಾರ?

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...