- ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಜಿಲ್ಲಾ ವರಿಷ್ಠಾಧಿಕಾರಿ
- ಹಿರಿಯೂರು ಕಾಂಗ್ರೆಸ್ನಿಂದ ಚುನಾವಣಾಧಿಕಾರಿಗಳಿಗೆ ದೂರು
ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿರಿಯೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? : ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ
ಇದನ್ನು ಪರಿಗಣಿಸಿದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಪೊಲೀಸ್ ಕಾನ್ಸ್ಟೇಬಲ್ ಗಳಾದ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ಎಂಬುವವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಇಲಾಖೆ ಸಿಬ್ಬಂದಿಗಳು ಮಾತ್ರವಲ್ಲದೇ, ಶಿಕ್ಷಣ ಇಲಾಖೆಯ ವೀರೇಶ್, ಶಿವಾನಂದ್ ಹಾಗೂ ತಾ.ಪಂ. ಕಚೇರಿ ಸಿಬ್ಬಂದಿ ಹರ್ಷವರ್ಧನ ಎಂಬುವವರ ವಿರುದ್ಧವೂ ದೂರು ನೀಡಲಾಗಿದ್ದು, ಇವರೆಲ್ಲರ ಮೇಲೆ ಮೇಲಾಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.