ಚಿತ್ರದುರ್ಗ | ವೃದ್ಧೆಯ ಮನೆಗೆ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ಸಿಎಂ ಕಚೇರಿ

Date:

Advertisements
  • ವೃದ್ಧೆಯ ಸಂಕಷ್ಟವನ್ನು ಟ್ವಿಟರ್ ಮೂಲಕ ಸಿಎಂ ಕಚೇರಿಗೆ ತಿಳಿಸಿದ್ದ ಸ್ಥಳೀಯ ಯುವಕ
  • ಮನವಿಗೆ ಸ್ಪಂದಿಸಿ ವಿದ್ಯುತ್ ಕಲ್ಪಿಸಲು ನೆರವಾದ ಸಿಎಂ ಕಚೇರಿ: ವ್ಯಾಪಕ ಮೆಚ್ಚುಗೆ

ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ವೃದ್ಧೆಯೊಬ್ಬರು ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರ ಕಚೇರಿ ನೆರವಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ವಿದ್ಯುತ್ ಸೌಲಭ್ಯದ ಫಲಾನುಭವಿ.

ವೃದ್ಧ ಮಹಿಳೆಯ ಸ್ಥಿತಿಯನ್ನು ಕಂಡಿದ್ದ ಸ್ಥಳೀಯ ಯುವಕ ಮಹೇಂದ್ರ ಎಂಬವರು ಟ್ವೀಟ್ ಮಾಡಿ, ‘ನಾಗರಿಕತೆ ಬೆಳೆದು ಶತಮಾನಗಳು ಕಳೆದರೂ, ಕರೆಂಟ್ ವೈರ್ ಹಾಕಿಸಿಕೊಳ್ಳಲು ಹಣವಿಲ್ಲದೆ ಇಂದಿಗೂ ದೀಪದ ಬೆಳಕಿನಲ್ಲಿ ದೋಣಮ್ಮ ಬದುಕುತ್ತಿರುವುದು ಈ ದೇಶದ ದುರಂತವೇ ಸರಿ’ ಎಂದು ಬರೆದು ಸಿಎಂ ಕಚೇರಿಯ ಗಮನಕ್ಕೆ ತಂದಿದ್ದರು.

Advertisements

ಇದಕ್ಕೆ ಸ್ಪಂದಿಸಿದ ಸಿಎಂ ಕಚೇರಿ, ಸಂಬಂಧಪಟ್ಟ ವಿದ್ಯುತ್ ನಿಗಮದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ, ವೃದ್ಧೆಯ ಮನೆಗೆ ತೆರಳಿದ ಅಧಿಕಾರಿಗಳು ಕೇವಲ 24 ಗಂಟೆಗಳೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.

‘ಟ್ವೀಟ್ ಮಾಡಿ 24 ಗಂಟೆಗಳ ಒಳಗೆ ಸಂಬಂಧಪಟ್ಟ ಎಲ್ಲ ಇಲಾಖೆಯವರು ಹಾಜರಾಗಿದ್ದಾರೆ. ನಿನ್ನೆ ರಾತ್ರಿಯೇ ಕರೆಂಟ್ ವ್ಯವಸ್ಥೆ ಮಾಡಿದ್ದಾರೆ. ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ವೃದ್ಧೆಯ ಬಹುದಿನಗಳ ಕನಸಿಗೆ ನೆರವಾದ ಮಹೇಂದ್ರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರವನ್ನು ಸ್ಥಳೀಯರಾದ ಮಹೇಂದ್ರ ಅವರು ನಮ್ಮ ಕಚೇರಿಯ ಗಮನಕ್ಕೆ ತಂದರು. ತಕ್ಷಣ ಅವರ ಮನವಿಗೆ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಆ ತಾಯಿಯ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ. ಬದಲಾವಣೆ ಮೂಡಿಸಲು ನಾವು ಸಿದ್ಧರಿದ್ದೇವೆ. ನಮ್ಮ ಈ ಕಾರ್ಯಕ್ಕೆ ನಿಮ್ಮ ಸಹಕಾರವೂ ಇರಲಿ’ ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಈ ಮೊದಲು @cmofkarnataka ಮತ್ತು @siddaramaiah ಎಂಬ ಎರಡು ಟ್ವಿಟರ್ ಖಾತೆಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯ, ಸಾರ್ವಜನಿಕರ ಅಹವಾಲು ಹಾಗೂ ದೂರನ್ನು ಸ್ವೀಕರಿಸಲು @osd_cmofkarnataka ಎಂಬ ಟ್ವಿಟರ್ ಖಾತೆ ತೆರೆದಿದ್ದಾರೆ. ಇದಕ್ಕೆ ಟ್ಯಾಗ್ ಮಾಡಿ ಬರುವ ದೂರುಗಳಿಗೆ ಸಿಎಂ ಕಚೇರಿಯ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ.

ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ಕಂಡು ಬಂದರೆ ಟ್ವಿಟರ್ ಮೂಲಕ ಮಾಹಿತಿ ನೀಡಲು ಸಿಎಂ ಕಚೇರಿಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X