ಕಾಂಗ್ರೆಸ್‌ ಸರ್ಕಾರಕ್ಕೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಆಗುತ್ತಿಲ್ಲ: ಸಿ ಟಿ ರವಿ ಟೀಕೆ

Date:

Advertisements
  • ‘ರಾಜ್ಯ ಸರ್ಕಾರಕ್ಕೆ ಕಸ್ತೂರಿ ರಂಗನ್ ಬಗ್ಗೆ ವಿರೋಧ ಇರಬಹುದು’
  • ‘ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ’

ಯಾವ ಕಾರಣಕ್ಕಾಗಿ ಎನ್​ಇಪಿ ತಿರಸ್ಕರಿಸುತ್ತಿದ್ದೀರಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಸಮಗ್ರ ಶಿಕ್ಷಣ ನೀತಿಯನ್ನು ಅವರು ವಿರೋಧಿಸುತ್ತಾರೆ ಎಂದರೆ ಸರ್ಕಾರಕ್ಕೆ ಕಸ್ತೂರಿ ರಂಗನ್ ಅವರ ಬಗ್ಗೆ ವಿರೋಧ ಇರಬಹುದು ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸರ್ಕಾರದ ಪ್ರಸ್ತುತ ನಡೆ ಗಮನಿಸುತ್ತಿದ್ದರೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಸಿದ್ಧವಿಲ್ಲದಂತೆ ಕಾಣುತ್ತದೆ. ಮೆಕಾಲೆ ಹಾಗೂ ಕಾರ್ಲ್ ಮಾರ್ಕ್ಸ್​ ಪ್ರಭಾವವನ್ನೇ ಮುನ್ನಡೆಸಿಕೊಂಡು ಹೋಗುವಂತೆ ತೋರುತ್ತಿದೆ. ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ” ಎಂದು ಟೀಕಿಸಿದರು.

ಬಿಜೆಪಿ ನಾಯಕ ಎಸ್​​​ ಟಿ ಸೋಮಶೇಖರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ನನಗೆ ಗೊತ್ತಿದ್ದಂತೆ ಕಾಂಗ್ರೆಸ್​ಗೆ ಯಾರೂ ವಾಪಸ್ ಹೋಗುತ್ತಿಲ್ಲ. ಆದರೆ ಒಮ್ಮೆ ಅನುಮಾನ ಬಂದರೆ ಎಲ್ಲರನ್ನೂ ಅಪನಂಬಿಕೆಯಿಂದ ನೋಡಬೇಕಾಗುತ್ತದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ಡಿ ಕೆ ಶಿವಕುಮಾರ್ ಅವರು ಸೋಮಶೇಖರ್‌ ಅವರ ಗುರುವಾಗಿರಬಹುದು, ಅದರಲ್ಲೇನೂ ತಪ್ಪಿಲ್ಲ. ಯಾವುದೇ ಸಂಪರ್ಕವಿಲ್ಲದೆ ಅವರು ಹೀಗೆ ಹೇಳಲು ಸಾಧ್ಯವಿಲ್ಲ. ಒಂದೋ ಇವರಿಗೆ ಮಾಹಿತಿ ಇರಬೇಕು ಅಥವಾ ಯಾರೋ ಸಂಪರ್ಕದಲ್ಲಿರಬಹುದು” ಎಂದು ಹೇಳಿದರು.

“ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಸರಿಯಾಗಿದ್ದರೆ ಇವರ ವರ್ತನೆಯ ಕುರಿತು ಯಾರೂ ಪತ್ರ ಬರೆದು, ಶಾಸಕಾಂಗ ಸಭೆ ಕರೆಯುತ್ತಿರಲಿಲ್ಲ. ಆದ್ದರಿಂದ ಯಾರ ಮಾತನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X