ಚುನಾವಣಾ ದಿನಾಂಕ ಪ್ರಕಟ ಹಿನ್ನೆಲೆ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

Date:

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಇಂದು (ಮಾರ್ಚ್‌ 29) ಘೋಷಣೆಯಾಗಲಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಸುದ‍್ಧಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಲಿದೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೈಗೊಂಡಿದ್ದ ಕೊಪ್ಪಳ, ಹಾವೇರಿ ಜಿಲ್ಲಾ ಪ್ರವಾಸ ರದ್ಧಾಗಿದೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಮಗಳು ರದ್ಧಾಗಿವೆ.

ಬಸವರಾಜ ಬೊಮ್ಮಾಯಿ ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ನೀಡಬೇಕಿತ್ತು. ಶಿಗ್ಗಾವಿ ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ಧಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ. ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಪ್ರಕಟವಾಗಬಹುದು ಎಂದು ಹೇಳಲಾಗಿತ್ತು. ಆದರೆ, ಚುನಾವಣಾ ಆಯೋಗ ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಗೆ ಸಿದ್ಧವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...