ಜಿಎ‌ಸ್‌ಟಿ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನಕ್ಕೆ ಏರಲು ಪ್ರಯತ್ನಿಸಿ: ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

Date:

ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಅವರು ಇಂದು (ಮೇ 17) ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ

“ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ” ಎಂದರು.

ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು

“ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿನಿಗದಿಪಡಿಸಲಾಗಿದ್ದು, ಹೆಚ್ಚುವರಿ 17000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ. ಈ ವರ್ಷ 409000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ” ಎಂದು ಹೇಳಿದರು.

ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧ

“ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮದ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...