ಜಾರ್ಖಂಡ್ | ವಿಶ್ವಾಸಮತ ಗೆದ್ದ ನೂತನ ಸಿಎಂ ಚಂಪೈ ಸೊರೇನ್

Date:

Advertisements

ಜಾರ್ಖಂಡ್‌ನಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ನೂತನ ಸಿಎಂ ಚಂಪೈ ಸೊರೇನ್ ಅವರು ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಸರ್ಕಾರ ಸುಭದ್ರವಾಗಿರುವುದನ್ನು ಸಾಬೀತುಪಡಿಸಿದ್ದಾರೆ.

ಸಿಎಂ ಚಂಪೈ ಸೊರೆನ್ ಅವರ ನೇತೃತ್ವದ ಜಾರ್ಖಂಡ್ ಸರ್ಕಾರಕ್ಕೆ 47 ಶಾಸಕರು ಬಹುಮತದ ಬೆಂಬಲ ಸೂಚಿಸಿದರೆ, 29 ಶಾಸಕರು ವಿಪಕ್ಷ ಸದಸ್ಯರ ಬೆಂಬಲದಲ್ಲಿದ್ದರು.

ಒಟ್ಟು 81 ಸದಸ್ಯರ ಜಾರ್ಖಂಡ್‌ ವಿಧಾನಸಭೆಯಲ್ಲಿ ಜೆಎಂಎಂ 29 ಶಾಸಕರನ್ನು ಹೊಂದಿದ್ದು ಮಿತ್ರ ಪಕ್ಷ ಕಾಂಗ್ರೆಸ್‌ 17 ಶಾಸಕರನ್ನು ಹೊಂದಿದೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ಪಕ್ಷದಿಂದ ತಲಾ ಒಬ್ಬ ಶಾಸಕರಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು 41 ಶಾಸಕರ ಬೆಂಬಲದ ಅಗತ್ಯವಿತ್ತು.

Advertisements

ಬಿಜೆಪಿಯವರು ಶಾಸಕರನ್ನು ಖರೀದಿಸಬಹುದು ಎಂಬ ಆತಂಕದಿಂದ ಫೆಬ್ರವರಿ 2ರಂದು ಹೈದರಾಬಾದ್‌ಗೆ ತೆರಳಿದ್ದ ಜೆಎಂಎಂ ನೇತೃತ್ವದ ಮೈತ್ರಿಕೂಟದ 40 ಶಾಸಕರು, ಸೋಮವಾರ ವಿಶ್ವಾಸಮತ ಯಾಚನೆ ಕಾರಣ ಭಾನುವಾರ ರಾಂಚಿಗೆ ಬಂದಿಳಿದಿದ್ದರು. ಎಲ್ಲ ಶಾಸಕರು ಮೂರು ದಿನಗಳಿಂದ ಹೈದರಾಬಾದ್‌ನ ಹೊರವಲಯದ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸುವುದಕ್ಕೂ ಮುನ್ನ ಮುಖ್ಯಮಂತ್ರಿ ಹುದ್ದೆಗೆ ಜನವರಿ 31ರಂದು ರಾಜೀನಾಮೆ ನೀಡಿದ್ದರು.

ಫೆಬ್ರವರಿ 2ರಂದು ಚಂಪೈ ಸೊರೇನ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದು ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೇನ್ ಅವರಿಗೆ ಮುಂದಿನ 10 ದಿನಗಳಲ್ಲಿ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಪ್ರದರ್ಶಿಸುವಂತೆ ಸೂಚಿಸಿದ್ದರು.

ಇದನ್ನು ಓದಿದ್ದೀರಾ? ಜಾರ್ಖಂಡ್ | ವಿಶ್ವಾಸ ಮತಯಾಚನೆಗೆ ವಿಧಾನಸಭೆಗೆ ಹೇಮಂತ್ ಸೊರೇನ್ ಆಗಮನ; ರಾಜ ಭವನದ ಮೇಲೆ ಆರೋಪ

ಚಂಪೈ ಸೊರೇನ್ ಅವರೊಂದಿಗೆ ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಮತ್ತು ಕಾಂಗ್ರೆಸ್‌ನ ಅಲಂಗೀರ್ ಆಲಂ ಸೇರಿದಂತೆ ಇಬ್ಬರು ನಾಯಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆಸಲಾಗಿದ್ದ ಮೊದಲ ಸಂಪುಟ ಸಭೆಯಲ್ಲಿ ಫೆ. 5ರಂದು ವಿಶ್ವಾಸಮತ ಯಾಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಸದ್ಯ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ವಿ ಕೂಡ ವಿಶ್ವಾಸಮತ ಯಾಚನೆಯ ಹಿನ್ನೆಲೆಯಲ್ಲಿ ವಿಧಾನಸಭೆಗೆ ಆಗಮಿಸಿದ್ದರು. ಜಾರ್ಖಂಡ್ ವಿಧಾನಸಭೆಗೆ ಹಾಜರಾಗಲು ಪಿಎಂಎಲ್‌ಎ ನ್ಯಾಯಾಲಯ ಅನುಮತಿ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X