ಈದಿನ ವಿಶೇಷ | ಮೈಸೂರಿನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಜೆಡಿಎಸ್ ರಾಜ್ಯಾಧ್ಯಕ್ಷ; ಇದೇ ಕ್ಷೇತ್ರದಿಂದ ಸಿ ಎಂ ಇಬ್ರಾಹಿಂ ಸ್ಪರ್ಧೆ

Date:

Advertisements
  • ಮುಸಲ್ಮಾನ ಪ್ರಾಬಲ್ಯದ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಹೊರಟ ಜೆಡಿಎಸ್ ರಾಜ್ಯಾಧ್ಯಕ್ಷ
  • ಸಿ ಎಂ ಇಬ್ರಾಹಿಂ ಕೈ ಹಿಡಿಯಲಿದೆಯೇ ಕುಟುಂಬ ರಾಜಕಾರಣಕ್ಕೆ ಒತ್ತುಕೊಟ್ಟ ಕ್ಷೇತ್ರ

ಹಳೆ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಮೈಸೂರು ಹೃದಯ ಭಾಗದಿಂದಲೇ ತನ್ನ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ದಳಪತಿಗಳು ರೂಪಿಸಿದ್ದ ಯೋಜನೆ ಈಗ ಫಲಪ್ರದವಾಗಿದೆ.

ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಇಲ್ಲಿನ ನರಸಿಂಹರಾಜ ಕ್ಷೇತ್ರದ ಉಮೇದುವಾರರಾಗಲಿದ್ದಾರೆ. ಜೆಡಿಎಸ್‌ನ ಉನ್ನತ ಮೂಲಗಳು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಶೀಘ್ರದಲ್ಲೇ ಈ ಬಗ್ಗೆ ಪಕ್ಷ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಪಕ್ಷದ ಮೂಲಗಳು ‘ಈದಿನ’ಕ್ಕೆ ತಿಳಿಸಿವೆ.

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ನರಸಿಂಹರಾಜ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್. ಕಳೆದ ಹನ್ನೊಂದು ಚುನಾವಣೆಗಳಲ್ಲೂ ಸೇಠ್ ಮನೆತನ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿಕೊಂಡೇ ಬಂದಿದೆ. ಹಿಂದೆ ಎನ್ಆರ್ ಕ್ಷೇತ್ರ ಪ್ರತಿನಿಧಿಸುತ್ತಿದ್ದ ತನ್ವೀರ್ ಸೇಠ್ ತಂದೆ ಅಜೀಜ್ ಸೇಠ್ ಇಲ್ಲಿ ಪಾರಮ್ಯ ಮೆರೆದರೆ, ಅವರ ಬಳಿಕ ಮಗ ಆ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

Advertisements

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಾಕಣದಿಂದ ಹಿಂದೆ ಸರಿಯುವುದಾಗಿ ತನ್ವೀರ್ ಸೇಠ್ ಹೇಳಿದ್ದರೂ, ಪಕ್ಷ ಅವರನ್ನೇ ಇಲ್ಲಿ ಅಭ್ಯರ್ಥಿಯನ್ನಾಗಿಸುವ ಸಾಧ್ಯತೆ ದಟ್ಟವಾಗಿದೆ. ಇನ್ನು ಇಲ್ಲಿನ ಚುನಾವಣೆಯಲ್ಲಿ ಜೆಡಿಎಸ್ ಮೂರು ಹಾಗೂ ನಾಲ್ಕನೇ ಸ್ಥಾನದಲ್ಲೇ ತನ್ನ ಹೋರಾಟ ಕೊನೆಗೊಳಿಸಿಕೊಂಡರೂ, ಅಸ್ತಿತ್ವ ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ.

ಮುಸಲ್ಮಾನ ಮತದಾರರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಜೆಡಿಎಸ್‌ಗಿಂತ ಉತ್ತಮ ಸಾಧನೆಯನ್ನು ಎಸ್ಡಿಪಿಐ, ಪಿಎಫ್ಐ, ಹಾಗೂ ಎಂಇಪಿ ಪಾರ್ಟಿಗಳು ಮಾಡಿವೆ. ಸಮರ್ಥ ಅಭ್ಯರ್ಥಿ ಇಲ್ಲದ ಕಾರಣ ಸೋಲಿನೆಡೆಗೆ ಮುಖಮಾಡಿದ ಜೆಡಿಎಸ್‌ಗೆ ಈ ಬಾರಿ ಬಲ ತುಂಬಲು ಖುದ್ದು ರಾಜ್ಯಾಧ್ಯಕ್ಷರೇ ಕಣಕ್ಕಿಳಿಯಲಿದ್ದಾರೆ.

ಸಮುದಾಯದ ವೋಟಿನ ಲಾಭ ಹಾಗೂ ಇಬ್ರಾಹಿಂ ಅವರಿಗೆ ಮೈಸೂರು ಮತ್ತು ಸ್ಥಳೀಯ ರಾಜಕಾರಣದ ಮೇಲಿರುವ ಹಿಡಿತ ಅವರನ್ನು ಇಲ್ಲಿಗೆ ಬರುವಂತೆ ಮಾಡಿದೆ. ಹೀಗಾಗಿದ್ದೇ ಆದಲ್ಲಿ ನರಸಿಂಹರಾಜ ಕ್ಷೇತ್ರದಲ್ಲಿ ಭರ್ಜರಿ ಸ್ಪರ್ಧೆ ಎದುರಾಗಲಿದೆ. ಇಬ್ರಾಹಿಂ ಸ್ಪರ್ಧೆಗಾಗಿ ಈ ಹಿಂದೆ ಇಲ್ಲಿಂದ ಕಣಕ್ಕಿಳಿದಿದ್ದ ಜೆಡಿಎಸ್ ಅಭ್ಯರ್ಥಿ, ಕ್ಷೇತ್ರ ತ್ಯಾಗಕ್ಕೆ ಮುಂದಾಗಿದ್ದು,ಸ್ವಂತ ಹಿತಕ್ಕಿಂತ– ಪಕ್ಷದ ಗೆಲುವು ಮುಖ್ಯ ಎಂದು ಹೇಳಿ ರಾಜಕೀಯ ಜಿದ್ದಾಜಿದ್ದಿನ ಕಣದೊಳಗೆ ಪಕ್ಷ ನಿಷ್ಠೆ ಮೆರೆದಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X