ಕೇರಳ ಸಿಎಂಗೆ ಅನಾರೋಗ್ಯ; 6 ದಿನ ಅಧಿಕೃತ ಕಾರ್ಯಕ್ರಮಗಳು ರದ್ದು  

Date:

Advertisements

ಅನಾರೋಗ್ಯದ ಹಿನ್ನಲೆಯಲ್ಲಿ ಜೂನ್ 27 ರವರೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಪಿಣರಾಯಿ ವಿಜಯನ್ ಅವರು 12 ದಿನಗಳ ಅಮೆರಿಕ, ಕ್ಯೂಬಾ ಮತ್ತು ಯುಎಇ ಪ್ರವಾಸ ಮುಗಿಸಿ ಮಂಗಳವಾರ ರಾಜ್ಯಕ್ಕೆ ವಾಪಸಾದ ನಂತರ ಅಸ್ವಸ್ಥಗೊಂಡ ಅವರನ್ನು ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ.

ತಮ್ಮ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನ್ಯೂಯಾರ್ಕ್‌ನ ಲೋಕ ಕೇರಳ ಸಭಾದ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಿಶ್ವ ಬ್ಯಾಂಕ್ ಅಧಿಕಾರಿಗಳನ್ನು ಭೇಟಿ ಮಾಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಮೋದಿಗೆ ಭಾರತದಲ್ಲಿ ಪತ್ರಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸಲು ಹೇಳಿ: ಬೈಡನ್‌ಗೆ ಸಿಪಿಜೆ ಒತ್ತಾಯ

ಅಮೆರಿಕ ಭೇಟಿಯ ನಂತರ ಮುಖ್ಯಮಂತ್ರಿ ನೇತೃತ್ವದ ನಿಯೋಗವು ಕ್ಯೂಬಾಕ್ಕೆ ತೆರಳಿತ್ತು. ಅಲ್ಲಿ ಅವರು ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಯಾಜ್-ಕನೆಲ್ ಅವರನ್ನು ಭೇಟಿಯಾಗಿದ್ದರು.

ಸಚಿವರಾದ ಕೆ ಎನ್ ಬಾಲಗೋಪಾಲ್, ವೀಣಾ ಜಾರ್ಜ್, ಯೋಜನಾ ಮಂಡಳಿ ಉಪಾಧ್ಯಕ್ಷ ವಿ ಕೆ ರಾಮಚಂದ್ರನ್, ಸಂಸದ ಜಾನ್ ಬ್ರಿಟ್ಟಾಸ್, ಮುಖ್ಯ ಕಾರ್ಯದರ್ಶಿ ವಿ ಪಿ ಜಾಯ್, ದೆಹಲಿಯ ರಾಜ್ಯ ಸರ್ಕಾರದ ವಿಶೇಷ ಕರ್ತವ್ಯಾಧಿಕಾರಿ ವೇಣು ರಾಜಾಮೋನಿ, ಆರೋಗ್ಯ ಕಾರ್ಯದರ್ಶಿ ಎಪಿಎಂ ಮಹಮ್ಮದ್ ಹನೀಷ್ ಅವರು ಸಿಎಂ ಪಿಣರಾಯಿ ನೇತೃತ್ವದಲ್ಲಿ ಜತೆಗಿದ್ದರು.

ಪ್ರವಾಸದ ಅಂತಿಮ ಹಂತದಲ್ಲಿ, ಕೇರಳ ಸ್ಟಾರ್ಟ್ಅಪ್ ಮಿಷನ್‌ನ ಪ್ರೀಮಿಯರ್ ಇನ್ಫಿನಿಟಿ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳು ದುಬೈಗೆ ಪ್ರಯಾಣ ಬೆಳೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X