ದಿನವೊಂದಕ್ಕೆ 1 ಕೋಟಿ ಲೀಟರ್‌ ಹಾಲು ಉತ್ಪಾದನೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Date:

Advertisements

ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅವರು ಮಂಗಳವಾರ ಕೆಎಂಎಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿ, “ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ. ಇತ್ತು” ಎಂದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ

Advertisements

ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

“ರಾಜ್ಯದಲ್ಲಿ ಸುಮಾರು 16,000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂಪಾಯಿ ಹೆಚ್ಚಿಸಲಾಗಿದೆ” ಎಂದರು.

ವಿಪಕ್ಷದ ಅಪಪ್ರಚಾರ

“ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ” ಎಂದು ಹೇಳಿದರು.

“2 ರೂ.ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೇ ಮಾತನಾಡುತ್ತಾರೆ. ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ” ಎಂದು ಪುನರುಚ್ಚರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X