ಆಸಿಡ್ ದಾಳಿಗೆ ಒಳಗಾದ ಯುವತಿಗೆ ಉದ್ಯೋಗ ನೀಡಿದ ಸಿಎಂ ಸಿದ್ದರಾಮಯ್ಯ

Date:

Advertisements
  • ತಂದೆ, ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಸಿಎಂಗೆ ಮನವಿ
  • ಸಂತ್ರಸ್ತೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ

ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. “ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ” ಎಂದು ಮುಖ್ಯಮಂತ್ರಿ ಎದುರು ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸ್ವಾಮಿ ವೇಷದಲ್ಲಿ ಆರೋಪಿ, ಭಕ್ತರ ವೇಷದಲ್ಲಿ ಪೊಲೀಸರು

ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದರು. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X