ಇಲಾಖೆಗಳಲ್ಲಿನ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದ ಸಿಎಂ ಸಿದ್ದರಾಮಯ್ಯ

Date:

Advertisements
  • ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಯ ಅನುಮೋದನೆ ಕಡ್ಡಾಯ
  • ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ

ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ಕ್ಕೆ ಮುಗಿದಿದ್ದು, ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಯ ಅನುಮೋದನೆ ಕಡ್ಡಾಯ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ಜೆ ಡಿ ಮಧುಚಂದ್ರ ತೇಜಸ್ವಿ ಈ ಸುತ್ತೋಲೆ ಹೊರಡಿಸಿದ್ದು, “ಮುಖ್ಯಮಂತ್ರಿ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಅದಕ್ಕೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು” ಎಚ್ಚರಿಸಲಾಗಿದೆ.

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿದ್ದರೂ ಕೆಲ ಇಲಾಖೆಗಳು ನಿಗದಿತ ಶೇ.6ಕ್ಕಿಂತ ಹೆಚ್ಚು ವರ್ಗಾವಣೆ ಮಾಡಿದ್ದು, ವರ್ಗಾವಣೋತ್ತರ ಅನುಮೋದನೆಗೆ ಕಡತ ಮಂಡಿಸಲಾಗಿದೆ. ಇದು ನಿಯಮ ಬಾಹಿರ, ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಅನಿವಾರ್ಯವಾದರೆ, ಸಕಾರಣಗಳನ್ನು ನೀಡಿ ಮುಖ್ಯಮಂತ್ರಿ ಅನುಮತಿ ಪಡೆಯಬೇಕು ಎಂದು ಸೂಚಿಸಲಾಗಿದೆ.

Advertisements

“ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆ ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯ ಅನುಮೋದನೆಯನ್ನು ತಪ್ಪದೇ ಪಡೆಯಬೇಕು” ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

“ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಯಾವುದೇ ಪ್ರಸಂಗದಲ್ಲಿಯೂ ಮೊದಲು ವರ್ಗಾವಣೆ ಮಾಡಿ ನಂತರ ಮುಖ್ಯಮಂತ್ರಿಯವರ ಘಟನೋತ್ತರ ಅನುಮೋದನೆ ಪಡೆಯಬೇಕು. ಈಗಾಗಲೇ 2023ರ ಮೇ 30ರಿಂದ ಜೂನ್ 30ರವರೆಗೆ 2023-24ನೇ ಸಾಲಿಗೆ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಜೂನ್ 1ರಿಂದ ಜುಲೈ 3ರ ವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಆದೇಶಿಸಲಾಗಿತ್ತು. ಆದರೆ, ನಿಗದಿತ ವರ್ಗಾವಣೆ ನಂತರವೂ ಇಲಾಖೆ ಹಂತದಲ್ಲಿ ವರ್ಗಾವಣೆಗಳನ್ನು ಮಾಡಿದರೆ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಬೇಕು. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X