ನೂತನ ದಾಖಲೆ ಹೊಸ್ತಿಲಿನಲ್ಲಿ ಸಿಎಂ ಸಿದ್ದರಾಮಯ್ಯ; ಜುಲೈ 3ರಿಂದ ಬಜೆಟ್ ಅಧಿವೇಶನ

Date:

  • ಜುಲೈ 3ರಿಂದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ
  • ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಐದನೇ ದಿನ, ಅಂದರೆ ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಜೆಟ್ ಮಂಡನೆ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದ ಪರ ಅತೀ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಸಚಿವರಾಗಲಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ ಸಿಎಂ ಸಿದ್ದರಾಮಯ್ಯ ಜುಲೈ3ರಿಂದ ಸದನ ಆರಂಭವಾಗಲಿದೆ. ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಕಾಲ ಇದರ ಮೇಲೆ ಚರ್ಚೆ ನಡೆಯಲಿದೆ. ಇದಾದ ಬಳಿಕ ನಾನು ಬಜೆಟ್ ಮಂಡನೆ ಮಾಡಲಿದ್ದೇನೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯವನ್ನು ಅಭಿವೃದ್ದಿ ಹಳಿಗೆ ತೆಗೆದುಕೊಂಡು ಹೋಗುವ ಹಾಗೂ ಜನಪ್ರಗತಿಶೀಲ ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ವಿದ್ಯುತ್ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ, ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲವೆಂಬ ಭರವಸೆ ಇದೆ : ಸಿಎಂ

ಇದೇ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ನೀಡಿದ್ದ ಗೋ ವಧೆ ವಿಚಾರದ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ನಮಗೂ ದನಕರುಗಳ ಮೇಲೆ ಗೌರವವಿದೆ. ಆದರೆ ಹನ್ನೆರಡು ವರ್ಷ ಮೀರಿದ ರಾಸುಗಳನ್ನು ವಧೆ ಮಾಡಲು ಅವಕಾಶವನ್ನು ಕಾನೂನು ಕಲ್ಪಿಸಿದೆ.

1964ರ ಕಾಯ್ದೆ ಉಲ್ಲೇಖ ಮಾಡದೆ ವೆಂಕಟೇಶ್ ಹಾಗೆಯೇ ಮಾಹಿತಿ ಕೊಟ್ಟಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಗೋ ವಧೆ ಕಾನೂನು ಹಿಂಪಡೆಯುವುದರ ಬಗ್ಗೆ ಚರ್ಚಿಸುವುದಾಗಿ ಅವರು ಸ್ಪಷ್ಟೀಕರಣ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...