ಸಾಹಿತಿ ಹಂ.ಪ. ನಾಗರಾಜಯ್ಯನವರು ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶುಕ್ರವಾರ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ನಂತರ ಪತ್ರಿಕಾ ಗೋಷ್ಠಿಯನ್ನು ನಡೆಸಿ ಮಾತನಾಡಿ ಈ ಮಾಹಿತಿ ನೀಡಿದರು.
ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ , ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ದತೆಗಳನ್ನು ಮಾಡುತ್ತಿದ್ದಾರೆ” ಎಂದರು.
ಇದನ್ನು ಓದಿದ್ದೀರಾ? ಮೈಸೂರು ದಸರಾ | ಉದ್ಘಾಟಕರಾದ ಸಾಹಿತಿ ಹಂಪನಾ, ಸಿಎಂ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ
ಮೈಸೂರು ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಕೂಡಾ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. “ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಅನಾಹುತ ನಡೆಯುವ ಸಂಭವವಿರುತ್ತಿರಲಿಲ್ಲ” ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಪೊಲೀಸರಿಗೆ ಸೂಚಿಸಿದ್ದಾರೆ.
