ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

Date:

Advertisements
  • ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ಪೂರ್ತಿ ದಿವಾಳಿಯಾಗಿದೆ: ಸಿದ್ದರಾಮಯ್ಯ
  • ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನಾಯಕರು ಮರಳಿ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಮ್ಮ ಪಕ್ಷ ಬಿಟ್ಟವರು ಮಾತ್ರವಲ್ಲ, ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಬರುವ ಎಲ್ಲರಿಗೂ ನಾನು ಸ್ವಾಗತಿಸುತ್ತೇನೆ” ಎಂದು ಮುಕ್ತ ಆಹ್ವಾನ ನೀಡಿದರು.

“ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ಪೂರ್ತಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಹೊಸ ಸರ್ಕಾರ ರಚನೆಯಾಗಿ 100 ದಿನ ಕಳೆಯಿತು. ಆದರೂ ವಿರೋಧ ಪಕ್ಷದ ನಾಯಕ ಇಲ್ಲ ಅಂದರೆ ಯೋಚನೆ ಮಾಡಿ. ರಾಜ್ಯದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಿವಾಳಿ ಆಗಲಿದೆ” ಎಂದು ಭವಿಷ್ಯ ನುಡಿದರು.

“ಪ್ರಧಾನಿ ನರೇಂದ್ರ ಮೋದಿ ಅವರೇ ಭೇಟಿಗೆ ಬರಬೇಡಿ ಎಂದಿದ್ದರು. ಆ ಪ್ರಕಾರ ನಾವು ನಡೆದುಕೊಂಡಿದ್ದೇವೆ. ಬಿಜೆಪಿಯವರಿಗೆ ಕೆಲಸವಿಲ್ಲ, ಸುಕಾಸುಮ್ಮನೇ ಆರೋಪಗಳನ್ನು ಮಾಡುತ್ತಾರೆ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Advertisements

“ಮೂರು ದಿನ ಮೈಸೂರು ಪ್ರವಾಸ ಕೈಕೊಂಡಿರುವೆ. ಕೆಡಿಪಿ ಸಭೆ ಇದೆ. ನಾಳೆ ಸುತ್ತೂರಿನಲ್ಲಿ ಒಂದು ಕಾರ್ಯಕ್ರಮವಿದೆ. ಹಾಗೆಯೇ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಅನುಷ್ಠಾನ ಕಾರ್ಯಕ್ರಮ ಮೈಸೂರಿನಲ್ಲಿದೆ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಾನು ಅಧ್ಯಕ್ಷತೆ ವಹಿಸಿಕೊಳ್ಳುವೆ. ರಾಹುಲ್‌ ಗಾಂಧಿ ಉಪಸ್ಥಿತಿ ಇರಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಮಧು ಬಂಗಾರಪ್ಪ

“ದೇಶದಲ್ಲೇ ದೊಡ್ಡ ಕಾರ್ಯಕ್ರಮ ಗೃಹಲಕ್ಷ್ಮಿ. ಸುಮಾರು 32 ಸಾವಿರ ಕೋಟಿ ರೂ. ಒಂದು ವರ್ಷಕ್ಕೆ ಖರ್ಚು ಆಗಲಿದೆ. ಈ ವರ್ಷ 18 ಸಾವಿರ ಕೋಟಿ ರೂ. ಖರ್ಚು ಆಗುತ್ತಿದೆ. 1.33 ಕೋಟಿ ಕುಟುಂಬದ ಯಜಮಾನಿಗೆ 2000 ರೂ. ಕೊಡುತ್ತಿದ್ದೇವೆ. ಐದು ಕಾರ್ಯಕ್ರಮ ಜಾರಿಯಾದ ಮೇಲೆ 4-5 ಸಾವಿರ ರೂ. ಒಂದು ಕುಟುಂಬಕ್ಕೆ ಲಾಭವಾಗಲಿದೆ. ಅವರ ಕೈಯಲ್ಲಿ ದುಡ್ಡು ಆಡುವುದರಿಂದ ಆರ್ಥಿಕ ಚಟುವಟಿಕೆ ಜಾಸ್ತಿ ಆಗಲಿದೆ. ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ” ಎಂದರು.

“ರಾಜ್ಯ ಸರ್ಕಾರದ ಕಾರ್ಯಕ್ರಮವಾಗಿ ಗೃಹಲಕ್ಷ್ಮಿ ಜಾರಿ ಅನುಷ್ಠಾನ ಮೈಸೂರಿನಲ್ಲಿ ನಡೆಯುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ಬರ ವಿಚಾರವಾಗಿ ಕ್ಯಾಬಿನೆಟ್‌ ಸಬ್‌ ಕಮಿಟಿ ಇದೆ. ಅದರ ವರದಿ ನಂತರ ಬರಗಾಲ ಎಂದು ಘೋಷಿಸುತ್ತೇವೆ. ನಂತರ ಕೇಂದ್ರ ಸರ್ಕಾರದ ಅಧಿಕಾರಿಗಳು ಬಂದು ವೀಕ್ಷಣೆ ಮಾಡುತ್ತಾರೆ. ಬರಗಾಲ ಘೋಷಣೆಯಾದ ಮೇಲೆ ಜನರಿಗೆ ಕೆಲಸ ಕೊಡಲು ಆರಂಭಿಸುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X