ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಇಂದಿನಿಂದಲೇ ಜಾರಿ: ಸಿಎಂ ಸಿದ್ದರಾಮಯ್ಯ

Date:

  • ಶನಿವಾರ ಕ್ಯಾಬಿನೆಟ್‌ ಸಭೆಯಲ್ಲಿ ಅಂಗೀಕರಿಸಿ, ಆದೇಶ ಹೊರಡಿಸಲಾಗುವುದು
  • ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಎಲ್ಲರಿಗೂ ಧನ್ಯವಾದ

ಚುನಾವಣೆಗೂ ಮೊದಲು ಕಾಂಗ್ರೆಸ್‌ ಜನರಿಗೆ ಕೊಟ್ಟ ಐದು ಗ್ಯಾರಂಟಿಗಳನ್ನೂ ಇವತ್ತೇ ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಕೊಡುವ ಮೂಲಕ ಆದೇಶ ಹೊರಡಿಸಿ, ಜಾರಿಗೊಳಿಸಲಾಗುವುದು. ಇದು ಕನ್ನಡಿಗರಿಗೆ ಹೊಸ ಸರ್ಕಾರ ನೀಡುವ ವಾಗ್ದಾನ, ಅದನ್ನು ಮಾಡಿಯೇ ತೀರುತ್ತೇವೆ” ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತವನ್ನು ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದಾರೆ ಎಂದರು.

“ಜೊತೆಗೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಹಿಂದೆಯೂ ಈಡೇರಿಸಿ ನುಡಿದಂತೆ ನಡೆಸಿದ್ದೇವೆ. ಈ ಬಾರಿಯೂ ಐದು ವರ್ಷಗಳಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಸಿಕ್ಕಿರುವ ಜಯ, ಇದು ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿರುವ ಜಯ. ನಾಡಿನ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭವಾಯಿತು. ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ರಾಷ್ಟ್ರ ನಾಯಕರು ಪ್ರಚಾರ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

“ನಾಡಿನ ಸಾಹಿತಿಗಳು, ಚಿಂತಕರು, ಸಂಘಟನೆಗಳ ನಾಯಕರು ಸಹಕಾರ ನೀಡಿದ್ದಾರೆ. ರಾಜ್ಯದ ಮಹಿಳೆಯರು, ಯುವಕರು, ರೈತರು, ಕಾರ್ಮಿಕರಿಗೆ ಧನ್ಯವಾದ ಹೇಳಲೇ ಬೇಕು. ವಿಶೇಷವಾಗಿ ಕನ್ನಡ ನಾಡಿನ ಎಲ್ಲ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...