ಸೇಡಿನ ರಾಜಕೀಯದ ವಿರುದ್ಧ ಗೆಲ್ಲುತ್ತೇನೆ: ಹೈಕೋರ್ಟು ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ

Date:

ಮುಡಾ ಪ್ರಕರಣದಲ್ಲಿ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟದಲ್ಲಿ ನಾನು ಜಯಗಳಿಸುತ್ತೇನೆ. ಹೈಕೋರ್ಟ್‌ ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪೂರ್ಣ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ” ಎಂದಿದ್ದಾರೆ.

“ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜೀನಾಮೆ ಯೋಚನೆ ಬೇಡ, ಸಿಎಂ ಸ್ಥಾನದಲ್ಲಿ ಮುಂದುವರಿಯಿರಿ: ಸಿದ್ದರಾಮಯ್ಯಗೆ ಹೈಕಮಾಂಡ್‌ ಸೂಚನೆ!

ಸತ್ಯಕ್ಕೆ ಜಯ ಸಿಗಲಿದೆ

“ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಹೋರಾಟದಲ್ಲಿ ಗೆಲ್ಲುತ್ತೇನೆ

“ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

“ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕು” ಎಂದು ಮನವಿ ಮಾಡಿದ್ದಾರೆ.

ನಾನು ಸಿಎಂ ಆಗಿದ್ದು ಸಹಿಸುತ್ತಿಲ್ಲ!

“ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ” ಎಂದಿದ್ದಾರೆ.

“ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ” ಎಂದು ಆರೋಪಿಸಿದ್ದಾರೆ.

“ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...