ಕುಮಾರಸ್ವಾಮಿಗೆ ಸುಳ್ಳು ಬಿಟ್ಟು ಬೇರೇನೂ ಗೊತ್ತಿಲ್ಲ, ಸುಳ್ಳೇ ಅವರ ಮನೆದೇವರು: ಸಿಎಂ ಸಿದ್ದರಾಮಯ್ಯ

Date:

Advertisements
  • ಕುಮಾರಸ್ವಾಮಿ ಅವರದು ದ್ವೇಷ ಹಾಗೂ ಅಸೂಯೆಗಳ ರಾಜಕಾರಣ
  • ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ: ಸಿದ್ದರಾಮಯ್ಯ

ಮಾಜಿ ಮುಖ್ಯಮತ್ರಿ ಎಚ್ ಡಿ ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು. ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಿ. ಉತ್ತರ ಕೊಡುತ್ತೇವೆ. ಸರ್ಕಾರ ಓಡಿಹೋಗುವುದಿಲ್ಲ. ಆದರೆ, ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇಬೇಕು. ವಿದ್ಯುತ್ ಬಿಲ್ಲನ್ನು ಬೆಸ್ಕಾಂನವರು ನೀಡುತ್ತಾರೆ. ಕುಮಾರಸ್ವಾಮಿಯವರು ಮೊದಲು ತಪ್ಪನ್ನೇ ಮಾಡಿಲ್ಲ ಎಂದವರು. ನಂತರ ದಂಡವನ್ನು ಕಟ್ಟಿರುವುದು, ಅವರು ಅಪರಾಧ ಮಾಡಿರುವುದನ್ನು ಒಪ್ಪಿಕೊಂಡಂತಾಗಿದೆ” ಎಂದರು.

ಜೆಡಿಎಸ್‌ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ,  “ಜೆಡಿಎಸ್ ಅಥವಾ ಬಿಜೆಪಿಯ ನಾಯಕರು, ಕಾಂಗ್ರೆಸ್ ನ ಸಿದ್ದಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ, ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ನ ಶಕ್ತಿಯನ್ನು ವಿಸ್ತರಿಸಬೇಕಿದೆ” ಎಂದು ಹೇಳಿದರು.

Advertisements

“ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿ ಹುಚ್ಚರಾಗಿದ್ದು, ತಾಳ್ಮೆ ಕಳೆದುಕೊಂಡಿದ್ದಾರೆ: ಡಿ ಕೆ ಶಿವಕುಮಾರ್‌ ತಿರುಗೇಟು

ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ

ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು ಇದರ ಲಾಭವನ್ನು ಬಿಜೆಪಿ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿದ್ದು, ಐಕ್ಯತೆ, ಒಗ್ಗಟ್ಟಿನಿಂದ. ಉಳಿದುಕೊಂಡು ಬಂದಿದ್ದೇವೆ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ” ಎಂದರು.

ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ

ರಾಜ್ಯ ಸರ್ಕಾರ ಬರಪರಿಹಾರ ನೀಡುವ ಸಂಬಂಧ ಕೇಂದ್ರಕ್ಕೆ ಒಂದು ವಾರದ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಕೇಂದ್ರದಿಂದ 17900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಗೂ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್ ಡಿ ಆರ್ ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ. ಬರಪರಿಹಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಗಳನ್ನು ನಡೆಸಲಾಗಿದೆ” ಎಂದು ಹೇಳಿದರು.

ಹಗರಣಗಳ ತನಿಖೆ

“ಹಿಂದಿನ ಸರ್ಕಾರದ ಹಗರಣಗಳ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 40% ಕಮಿಷನ್, ಕೋವಿಡ್, ಬಿಟ್ ಕಾಯಿನ್ ಸೇರಿದಂತೆ ಇತರೆ ಹಗರಣಗಳ ತನಿಖೆಗೆ ಆಯೋಗಗಳನ್ನು ರಚಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ” ಎಂದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X