ಧರ್ಮಸ್ಥಳ ಪ್ರಕರಣ | ಎಸ್‌ಐಟಿ ರಚನೆ; ಪೊಲೀಸ್ ಇಲಾಖೆ ವರದಿ ಬಳಿಕ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವು ಮತ್ತು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಸದ್ಯಕ್ಕೆ ಇಲ್ಲ. ಈ ವಿಚಾರದಲ್ಲಿ ಯಾರ ಒತ್ತಡವೂ ಇಲ್ಲ, ಯಾರ ಒತ್ತಡಕ್ಕೂ ನಾವು ಮಣಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ಆಗಲಿ ಯಾರೇ ಆಗಲಿ, ನಾವು ಯಾರು ಹೇಳುವುದಕ್ಕೂ ಪರವೂ ಇಲ್ಲ ವಿರೋಧವೂ ಇಲ್ಲ. ಕಾನೂನು ಪ್ರಕಾರವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಕಾನೂನು ಪ್ರಕಾರವಾಗಿ ಸರ್ಕಾರಕ್ಕೆ ಎಸ್‌ಐಟಿ ಮಾಡಬೇಕು ಎಂದನಿಸಿದರೆ ಮಾಡುತ್ತೇವೆ. ಆದರೆ ಸದ್ಯಕ್ಕೆ ಎಸ್‌ಐಟಿ ರಚನೆಯಿಲ್ಲ. ಪೊಲೀಸ್ ಇಲಾಖೆ ಆಧಾರದ ಮೇಲೆ ಮಾಡಲಾಗುವುದು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವಿಶೇಷ ತನಿಖಾ ತಂಡ ರಚನೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

Advertisements

“ದೂರು ನೀಡಿದ ವ್ಯಕ್ತಿ ಹತ್ತು ವರ್ಷ ಪರಾರಿಯಾಗಿದ್ದ. ಪೊಲೀಸರಿಗೆ ಹೇಳಿಕೆ ನೀಡಿದ್ದು ತಾನೇ ಮೃತದೇಹ ಹೂತಿ ಹಾಕಿರುವುದಾಗಿ ಹೇಳಿದ್ದಾನೆ. ಸ್ಥಳ ತೋರಿಸುವುದಾಗಿಯೂ ಹೇಳಿದ್ದಾನೆ. ಪೊಲೀಸರು ಈ ಬಗ್ಗೆ ವರದಿ ನೀಡಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಈ ವಿಚಾರದಲ್ಲಿ ಎಸ್‌ಐಟಿ ರಚಿಸುವಂತೆ ಸರ್ಕಾರದ ಮೇಲೆ ಒತ್ತಡವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ “ಸರ್ಕಾರದ ಮೇಲೆ ಯಾವ ಒತ್ತಡವೂ ಇಲ್ಲ. ಒತ್ತಡ ಹಾಕಿದರೂ ನಾವು ಯಾರ ಮಾತನ್ನೂ ಕೇಳಲ್ಲ. ಕಾನೂನು ರೀತಿಯಲ್ಲಿ ಏನು ಮಾಡಬೇಕೊ ಅದನ್ನು ಮಾಡುತ್ತೇವೆ” ಎಂದು ಸ್ಪಷ್ಪಪಡಿಸಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸುವಂತೆ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಆಗ್ರಹಿಸಿದೆ. ಈ ಸಂಬಂಧ ಮಹಿಳಾ ಆಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಹಾಗೆಯೇ ಹಿರಿಯ ವಕೀಲರಾದ ಸಿಎಸ್‌ ದ್ವಾರಕನಾಥ್ ಮತ್ತು ಎಸ್‌ ಬಾಲನ್ ಅವರೂ ಸಿಎಂ ಭೇಟಿಯಾಗಿ ಎಸ್‌ಐಟಿ ರಚನೆ ಮನವಿ ಮಾಡಿದ್ದಾರೆ. ಈ ಸಂಬಂಧ ನಿನ್ನೆ(ಜುಲೈ 17) ಪತ್ರಿಕಾಗೋಷ್ಠಿಯನ್ನೂ ನಡೆಸಲಾಗಿದೆ. ಆದರೆ ಸದ್ಯ ಎಸ್‌ಐಟಿ ರಚನೆಯಿಲ್ಲ ಎಂದು ಸಿಎಂ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X