ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

Date:

Advertisements
  • ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ
  • ಗ್ರೀನ್ ಫೀಲ್ಡ್ ರೋಡ್ ಕಾರಿಡಾರ್ ವಲಯಗಳಲ್ಲಿ ಹೂಡಿಕೆ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದರು.

ಗುರುವಾರ ತಮ್ಮನ್ನು ಭೇಟಿಯಾದ ನವದೆಹಲಿಯಲ್ಲಿನ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಪ್ ಗ್ರೀನ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯ ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.

“ರಾಜ್ಯದಲ್ಲಿ ನಗರ ಸಾರಿಗೆ, ಗ್ರೀನ್ ಫೀಲ್ಡ್ ರೋಡ್ ಕಾರಿಡಾರ್ ಮೊದಲಾದ ವಲಯಗಳಲ್ಲಿ ಹೂಡಿಕೆ ಮಾಡಬಹುದು. ಇದಲ್ಲದೆ ಬೆಂಗಳೂರು ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ತಂತ್ರಜ್ಞಾನ ನಗರಿ, ಜ್ಞಾನನಗರಿ ಎಂದೆಲ್ಲ ಹೆಸರುವಾಸಿಯಾಗಿದೆ. ಕೌಶಲ್ಯಯುಕ್ತ ಮಾನವ ಸಂಪನ್ಮೂಲ ಹಾಗೂ ಅಕುಶಲ ಮಾನವ ಸಂಪನ್ಮೂಲವೂ ಇಲ್ಲಿ ಲಭ್ಯವಿದ್ದು, ಹೂಡಿಕೆಗೆ ರಾಜ್ಯದಲ್ಲಿ ವಿಪುಲ ಅವಕಾಶವಿದೆ” ಎಂದು ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಇದಕ್ಕೆ ಪ್ರತಿಕ್ರಿಯಿಸಿದ ಹೈಕಮಿಷನರ್ ಫಿಲಿಪ್ ಗ್ರೀನ್ ಅವರು ತಾವು ಹೂಡಿಕೆದಾರರ ನಿಯೋಗದೊಂದಿಗೆ ಭೇಟಿಯಾಗುವುದಾಗಿ ಹಾಗೂ ಹೂಡಿದಾರರ ಸಭೆ ಆಯೋಜಿಸುವುದಾಗಿ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿಯೂ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವೆ ಹಲವು ಒಡಂಬಡಿಕೆಗಳಿಗೆ ಸಹಿ ಮಾಡಲಾಗಿದೆ. ಮುಂದೆಯೂ ಈ ಬಾಂಧವ್ಯ ಮುಂದುವರೆಯಲಿದೆ ಎಂದು ಸಹಮತ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಕಾನ್ಸಲ್ ಜನರಲ್ ಹಿಲರಿ ಮೆಕ್ ಗೀಚಿ (Ms Hilary McGeachy), ದಕ್ಷಿಣ ಏಷ್ಯಾ ದಲ್ಲಿ ಆಸ್ಟ್ರೇಲಿಯಾದ ವಾಣಿಜ್ಯ ಹಾಗೂ ವ್ಯಾಪಾರ ಸಚಿವೆ ಕ್ಯಾಥರೀನ್ ಗಲ್ಲಘರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X