ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ; ವಿದ್ಯಾರ್ಥಿಗಳಿಗೆ ಫುಲ್‌ ಖುಷಿ

Date:

ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

- Advertisement -

250 ವಿದ್ಯಾರ್ಥಿಗಿರುವ ಮೊರಾರ್ಜಿ ಶಾಲೆಗೆ ತೆರಳಿದ ಮುಖ್ಯಮಂತ್ರಿಗಳು, ಮೊದಲಿಗೆ 10 ನೇ ತರಗತಿಗೆ ಭೇಟಿ ನೀಡಿದರು. ಪಠ್ಯ, ಬಾತ್ ರೂಂ ಕಿಟ್ ಸಮರ್ಪಕ ವಿತರಣೆ ಆಗಿದೆಯಾ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು. ಸರಿಯಾಗಿ ಆಗ್ತಿದೆ ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದು ವಿದ್ಯಾರ್ಥಿಗಳು ಉತ್ತರಿಸಿದರು. ಆಗಾಗ ಪಲಾವ್ ಕೊಡ್ತಾರೆ ಎಂದು ವಿದ್ಯಾರ್ಥಿಗಳು ಖುಷಿಪಟ್ಟರು. ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಸಿಎಂಗೆ ತಿಳಿಸಿದರು.

ಕಳೆದ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ ಶಿಕ್ಷಕರು ವಿವರಣೆ ನೀಡಿದರು. ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ, ಶಾಸಕ ಪ್ರಕಾಶ್ ರಾಥೋಡ್ ಸೇರಿ ಇತರರು ಉಪಸ್ಥಿತರಿದ್ದರು.‌

ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ

ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ, ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನಿಸಿದಾಗ ‘ನೀವೇ ಆರಂಭಿಸಿದ್ದು’ ಎಂದು ವಿದ್ಯಾರ್ಥಿ ಹೇಳಿದರು. ಮಕ್ಕಳು ಚಪ್ಪಾಳೆ ತಟ್ಟಿದರು.

“ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.

“ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...