ಬೆಂಗಳೂರು ಟೌನ್‌ಹಾಲ್ ಮುಂದೆ ಜನಪರ ಪ್ರತಿಭಟನೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಬೆಂಗಳೂರಿನ ಟೌನ್‌ಹಾಲ್ ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಪ್ರಗತಿಪರ ಚಳವಳಿಗಳ ನೈತಿಕ ಶಕ್ತಿ-ಡಾ.ಮರುಳಸಿದ್ದಪ್ಪ” ಅವರ ಗೌರವ ಗ್ರಂಥ ಲೋಕಾರ್ಪಣೆಗೊಳಿಸಿದ ಬಳಿಕ ಕೆ.ಎಂ.ಎಸ್ ದಂಪತಿಯನ್ನು ಅಭಿನಂದಿಸಿ, ಅವರು ಮಾತನಾಡಿದರು.

ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರವಾದ ಚಳವಳಿಗಳು ಸಮಾಜಕ್ಕೆ ಅತ್ಯಗತ್ಯ. ಇಂಥಾ ಪ್ರತಿಭಟನೆ, ಚಳವಳಿಗಳನ್ನು ನಾನು ಬೆಂಬಲಿಸುತ್ತೇನೆ. ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದರು.

Advertisements

ಆದಷ್ಟು ಶೀರ್ಘವಾಗಿ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಟೌನ್ ಹಾಲ್ ಎದುರು ಮತ್ತೆ ಪ್ರತಿಭಟನೆಗಳಿಗೆ, ಹೋರಾಟಗಳಿಗೆ ಅವಕಾಶ ಆಗುವ ದಿಕ್ಕಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ಅಸಮಾನತೆ ತುಂಬಿರುವ ಜಡ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಈ ಬದಲಾವಣೆ ಜನಪರ ಹೋರಾಟ, ಚಳವಳಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರತೆಯಿಂದ ಕೂಡಿದ ಹೋರಾಟ, ಪ್ರತಿಭಟನೆಗಳು ನಡೆಯಬೇಕು. ಸಮಾಜ ಮತ್ತು ಸರ್ಕಾರವನ್ನು ಎಚ್ಚರಿಸುವ ಹೋರಾಟಗಳಿಗೆ ಸ್ವಾಗತಿಸುವುದು ಮಾತ್ರವಲ್ಲದೆ, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮರುಳಸಿದ್ದಪ್ಪ ಅವರು ನಿಜವಾದ ಶರಣರು: ಸಿಎಂ ಮೆಚ್ಚುಗೆ

ಬಸವಣ್ಣನವರ ಕೆಲವು ಆರಾಧಕರು ಬಸವಣ್ಣರ ವೈಚಾರಿಕತೆಯನ್ನು ಆಚರಿಸುವುದಿಲ್ಲ. ಮೌಢ್ಯ ವಿರೋಧಿ ಬಸವಣ್ಣನವರ ಮೌಲ್ಯಗಳನ್ನು ಆಚರಿಸುವುದಿಲ್ಲ. ಆದರೆ ಕೆ.ಮರುಳಸಿದ್ದಪ್ಪ ಅವರು ನಿಜವಾದ ಶರಣರು. ನುಡಿದಂತೆ, ಬರೆದಂತೆ ಬದುಕುತ್ತಿದ್ದಾರೆ ಎಂದು ಸಿಎಂ ಸಭೆಯಲ್ಲಿ ಮೆಚ್ಚುಗೆ ಸೂಚಿಸಿದರು.

ಬಿಜೆಪಿ ವಿರೋಧಿಸಿ ನಾವು-ದೇವೇಗೌಡರು ಜೆಡಿಎಸ್ ಮಾಡಿದೆವು. ಆಮೇಲೆ ನನ್ನನ್ನು ಉಚ್ಛಾಟಣೆ ಮಾಡಿಬಿಟ್ಟರು. ಆ ಸಂದರ್ಭದಲ್ಲಿ ನಾನು ಕೆ.ಮರುಳ ಸಿದ್ದಪ್ಪ ಅವರನ್ನು ಭೇಟಿಯಾದೆ ಎಂದು ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸ್ಮರಿಸಿಕೊಂಡರು.

ಡಾ. ಕೆ.ಎಂ.ಎಸ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥದ ಸಂಪಾದಕರಾದ ಎಚ್.ದಂಡಪ್ಪ, ಶ್ರೀನಿವಾಸ್ ಜಿ.ಕಪ್ಪಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X