ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

Date:

Advertisements

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಈ ದಾಳಿ ನಡೆಸಲಾಗಿದೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪುಲ್ವಾಮ ದುರಂತದ ಬಗ್ಗೆ ಸತ್ಯಪಾಲ್ ಮಲಿಕ್ ಸತ್ಯ ಹೇಳಿದ್ದೇ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ಪುಲ್ವಾಮ ದುರಂತ ನಡೆದ ಸಮಯದಲ್ಲಿ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬಜೆಟ್ ಅಧಿವೇಶನ | ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ ನಿರ್ಣಯ ಮಂಡಿಸಿದ ಸರ್ಕಾರ; ಬಿಜೆಪಿ ಧರಣಿ

“ಕೇಂದ್ರ ಸರ್ಕಾರ ತನ್ನ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು. ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X