ಸಿಎಂ ಜನತಾ ದರ್ಶನ | 2013ರಿಂದ ಗೂಡಂಗಡಿ ಇಡಲು ಅಲೆದಾಡುತ್ತಿದ್ದ ನಿಂಗಮ್ಮ: ಸ್ಥಳದಲ್ಲೇ ಪರಿಹಾರ

Date:

Advertisements

ಕಳೆದ 2013ರ ಜನವರಿಯಿಂದ ಕೇವಲ ಒಂದು ಗೂಡಂಗಡಿ ಇಡಲು ಅಲೆಡಾಡುತ್ತಿದ್ದ ಮಹಿಳೆಯೋರ್ವರಿಗೆ ಸಿಎಂ ಸಿದ್ದರಾಮಯ್ಯ ಅವರು ಜನತಾ ದರ್ಶನದ ಮೂಲಕ ಪರಿಹಾರ ಸೂಚಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳುವ ಗಾಡಿಯಲ್ಲಿ ಟೀ ಇಟ್ಟುಕೊಂಡು ವ್ಯಾಪಾರ ಮಾಡಲು ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಕಿರುಕುಳದ ನೀಡುತ್ತಿರುವ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದರು.

ನನಗೆ ಗಂಡ ಹಾಗೂ ಇಬ್ಬರು ಮಕ್ಕಳಿದ್ದಾರೆ. ಜೀವನ ಸಾಗಿಸಲು ಡೈರಿ ಸರ್ಕಲ್ ಬಳಿ ಗಾಡಿಯಲ್ಲಿ ಟೀ ಇಟ್ಟುಕೊಂಡು ವ್ಯಾಪಾರ ಮಡಲು ಹೊರಟಿದ್ದೆ. ಈ ಬಗ್ಗೆ 2013ರಿಂದಲೂ ಅಲೆದಾಡುತ್ತಿದ್ದೇನೆ. ಆದರೆ ಈವರೆಗೆ ನನಗೆ ಅವಕಾಶ ನೀಡಿಲ್ಲ. ಗಾಡಿ ಇಟ್ಟರೆ ಮೈಕೋ ಲೇಔಟ್ ಸಂಚಾರಿ ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿಗಳು ಬಂದು ಕಿರುಕುಳ ನೀಡುತ್ತಾರೆ. ಹಾಗಾಗಿ ದಯವಿಟ್ಟು ನನಗೆ ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.

Advertisements
WhatsApp Image 2023 11 27 at 11.47.40 AM
ಜನತಾ ದರ್ಶನದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಹಿರಿಯರೋರ್ವರು ಆಶೀರ್ವಾದ ಮಾಡಿದ ಕ್ಷಣ

ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೇ ಕಿರುಕುಳ ನೀಡದಂತೆ ಹಾಗೂ ಚಹಾ ಅಂಗಡಿ ಇಡಲು ಅವಕಾಶ ನೀಡುವಂತೆ ಸೂಚನೆ ನೀಡುವ ಮೂಲಕ ಪರಿಹಾರ ಸೂಚಿಸಿದರು.

ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ
ಸಿಎಂ ಅವರ ಇಂದಿನ ಜನತಾದರ್ಶನದಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರುಗಳ ಸರಮಾಲೆಯೇ ಜನರಿಂದ ಬರುತ್ತಿದೆ.

ಜನತಾ ದರ್ಶನಕ್ಕೆ ಆಗಮಿಸಿದ್ದ ವೃದ್ಧರೋರ್ವರು, “ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು ಬಿಬಿಎಂಪಿಗೆ ಹೋದರೆ, ‘ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ’ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆ ಎಂದು ಸಿಎಂ ಬಳಿ ದೂರಿದರು.

janata darshana

ಈ ಬಗ್ಗೆ ದೂರು ಸ್ವೀಕರಿಸುತ್ತಿದ್ದಂತೆಯೇ ಅಧಿಕಾರಿಗಳ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಅಧಿಕಾರಿಯನ್ನು ಕರೆದು ಸದರಿ ಪ್ರಕರಣವನ್ನು ‘ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ನನಗೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಿ: ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ

ಸಿಡಾಕ್ ಸಂಸ್ಥೆಯಿಂದ ತರಬೇತಿ ಪಡೆದಿದ್ದರೂ ಎರಡು ವರ್ಷದಿಂದ ನಮಗೆ ಬಿಬಿಎಂಪಿ ನೆರವು ನೀಡಿಲ್ಲ ಎಂದು ವಿಶೇಷ ಚೇತನರು ಸಿಎಂಗೆ ದೂರು ನೀಡಿದ್ದಾರೆ. ತಮ್ಮ ಮನವಿಯಲ್ಲಿ 148 ಮಂದಿ ವಿಶೇಷ ಚೇತನರಿಂದ ಮೂರು ಚಕ್ರ ವಾಹನಕ್ಕೆ ಬೇಡಿಕೆ ಇದೆ. ಆದರೆ ಈವರೆಗೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ತಿಳಿಸಿದರು.

‘ತರಬೇತಿ ಪಡೆದಿರುವ 98 ಮಂದಿಗೆ ಮುಂದಿನ 15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಬೇಕು. ಉಳಿದವರಿಗೆ ತ್ರಿಚಕ್ರ ವಾಹನ ಕೊಡಲು ತಕ್ಷಣ ಕ್ರಮ ಕೈಗೊಳ್ಳಬೇಕು’ ಎನ್ನುವ ಖಡಕ್ ಸೂಚನೆಯನ್ನು ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನೀಡಿದರು.

‘ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ ಬಗೆಹರಿಸಿ ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X